Advertisement

ಮಂಜನಾಡಿ: ವಿಷ್ಣುಮೂರ್ತಿ ಜನಾರ್ಧನ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ನಗದು ದೋಚಿದ ಕಳ್ಳರು

09:36 AM Mar 02, 2021 | Team Udayavani |

ಉಳ್ಳಾಲ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜನಾಡಿ ಗ್ರಾಮದ ಶ್ರೀ ವಿಷ್ಣು ಮೂರ್ತಿ ಜನಾರ್ಧನ ದೇವಸ್ಥಾನಕ್ಕೆ ಕನ್ನ ಹಾಕಿರುವ ಕಳ್ಳರು ಕಾಣಿಕೆ ಹುಂಡಿಯಲ್ಲಿಧ 2,000 ನಗದು ಹಣವನ್ನು ಕಳವು ನಡೆಸಿದ್ದಾರೆ.

Advertisement

ದೇವಸ್ಥಾನದ ಉತ್ತರ ಭಾಗದ ಬಾಗಿಲು ಮುರಿದು ಪ್ರವೇಶಿದ್ದ ಕಳ್ಳರು, ಗರ್ಭಗುಡಿಯ ಎದುರು ಇಟ್ಟಿದ್ದ ಕಾಣಿಕೆ ಡಬ್ಬಿಯ ಬೀಗ ಮುರಿದು ನಗದು ಹಣವನ್ನು ಕಳವು ಮಾಡಿದ್ದಾರೆ.  ಬೆಳಗ್ಗಿನ ಜಾವ ದೇವಸ್ಥಾನದ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯವನ್ನು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಪುತ್ತೂರು: ಮಹಿಳಾ ಎಸ್.ಐ ಮೇಲೆ ಹಲ್ಲೆ ನಡೆಸಿದ ಸಹೋದರಿಯರು; ಆರೋಪಿಗಳ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next