Advertisement

Manjeshwar: ಮಂಜೇಶ್ವರ ಚುನಾವಣ ತಕರಾರು ಪ್ರಕರಣ ವಿಚಾರಣೆ ಆ. 17ಕ್ಕೆ ಮುಂದೂಡಿಕೆ

08:16 PM Aug 03, 2024 | Team Udayavani |

ಕಾಸರಗೋಡು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಚುನಾವಣ ತಕರಾರು ಪ್ರಕರಣದ ವಿಚಾರಣೆಯನ್ನು ಕಾಸರಗೋಡು ಜಿಲ್ಲಾ ಸೆಶನ್ಸ್‌ ನ್ಯಾಯಾಲಯ ಆ. 17ಕ್ಕೆ ಮುಂದೂಡಿದೆ.

Advertisement

ಬಿಜೆಪಿ ರಾಜ್ಯ ಅಧ್ಯಕ್ಷ, ಕಳೆದ ಬಾರಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಕೆ. ಸುರೇಂದ್ರನ್‌ ಸಹಿತ ಬಿಜೆಪಿಯ ಆರು ಮಂದಿಯನ್ನು ಈ ಪ್ರಕರಣದಲ್ಲಿ ಆರೋಪಿಯನ್ನಾಗಿ ಸೇರಿಸಲಾಗಿದೆ. ಅಂದು ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಕೆ. ಸುಂದರ ಅವರನ್ನು ಬೆದರಿಸಿ ಎರಡೂವರೆ ಲಕ್ಷ ರೂ. ಹಾಗೂ ಮೊಬೈಲ್‌ ಫೋನ್‌ ನೀಡಿ ಅವರ ನಾಮಪತ್ರ ಹಿಂದೆಗೆದುಕೊಳ್ಳುವಂತೆ ಮಾಡಲಾಗಿತ್ತೆಂದು ಆರೋಪಿಸಿ ನೀಡಲಾದ ದೂರಿನಂತೆ ಆರು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅನಂತರ ತನಿಖೆಯನ್ನು ಕ್ರೈಂ ಬ್ರ್ಯಾಂಚ್‌ಗೆ ಹಸ್ತಾಂತರಿಸಲಾಗಿತ್ತು. ಕ್ರೈಂ ಬ್ರ್ಯಾಂಚ್‌ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಕಾನೂನು ಪ್ರಕಾರ ಇದು ನೆಲೆಗೊಳ್ಳದೆಂದೂ ಆದ್ದರಿಂದ ಈ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಆರೋಪಿಗಳಾಗಿ ಹೆಸರಿಸಲಾದ ಸುರೇಂದ್ರನ್‌ ಸಹಿತ ಆರು ಮಂದಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನ್ಯಾಯಾಲಯದಲ್ಲಿ ಆರಂಭಗೊಂಡಿದ್ದು, ವಿಚಾರಣೆಯನ್ನು ಆ. 17ಕ್ಕೆ ಮುಂದೂಡಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next