Advertisement

ಪೂಜಾರಿಯವರ ಆಶೀರ್ವಾದ ಪಡೆದ ಮಂಜುನಾಥ ಭಂಡಾರಿ

01:22 AM Nov 25, 2021 | Team Udayavani |

ಬಂಟ್ವಾಳ: ದಕ್ಷಿಣ ಕನ್ನಡ, ಉಡುಪಿ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್‌ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರು ಬುಧವಾರ ಹಿರಿಯ ಕಾಂಗ್ರೆಸ್‌ ನಾಯಕ ಬಿ. ಜನಾರ್ದನ ಪೂಜಾರಿ ಅವರನ್ನು ಬಂಟ್ವಾಳದ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

Advertisement

ಈ ವೇಳೆ ಮಾತನಾಡಿದ ಪೂಜಾರಿ ಅವರು, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಭಂಡಾರಿ ಆಯ್ಕೆ ಅತ್ಯುತ್ತಮವಾಗಿದ್ದು, ಪಕ್ಷದ ಕಾರ್ಯಕರ್ತರ ನೋವಿಗೆ ಸ್ಪಂದಿಸುವ ವರ್ಚಸ್ಸು ಉಳ್ಳ ನಾಯಕರಾಗಿದ್ದಾರೆ. ಅವರು ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್‌ನಲ್ಲಿ ಸಕ್ರಿಯರಾಗಿದ್ದು, ಸಾಮಾನ್ಯ ಕಾರ್ಯಕರ್ತನಾಗಿ ಈ ಮಟ್ಟಕ್ಕೆ ಬೆಳೆದಿದ್ದಾರೆ.

ಅನೇಕ ವರ್ಷಗಳ ಕೆಲಸ ಮಾಡಿದ ಅನುಭವ ಹೊಂದಿದ್ದು, ಉಭಯ ಜಿಲ್ಲೆಯ ಅಭಿವೃದ್ಧಿಗೆ ತೊಡಗಿಸಿಕೊಳ್ಳಲು ಒಳ್ಳೆಯ ಅವಕಾಶ ಲಭಿಸಿದೆ. ಸ್ಥಳೀಯ ಸಂಸ್ಥೆಗಳ ಮತದಾರರು ಅವರನ್ನು ಗೆಲ್ಲಿಸಿ ಕೊಡುವ ವಿಶ್ವಾಸವಿದೆ ಎಂದರು.

ಇದನ್ನೂ ಓದಿ:ಮಹೇಶ್‌ ಜೋಷಿ ಕಸಾಪ ಅಧ್ಯಕ್ಷ: ಅಧಿಕೃತ ಘೋಷಣೆ

ಮಂಜುನಾಥ ಭಂಡಾರಿ ಮಾತನಾಡಿ, ಹಿರಿಯರಾದ ಜನಾರ್ದನ ಪೂಜಾರಿ ಅವರ ಆಶೀರ್ವಾದವೇ ನನಗೆ ಒಂದು ರೀತಿಯ ಗೆಲುವಾಗಿದೆ. ಉತ್ತಮ ರಾಜಕಾರಣಿಯಾಗಲು ಪ್ರೇರಣೆಯಾಗಿರುವವರು ಅವರು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next