Advertisement

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

11:27 PM Jun 02, 2024 | Team Udayavani |

ಮಂಗಳೂರು/ ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯ ಕರಾವಳಿ ಭಾಗಕ್ಕೆ ರವಿವಾರ ಮುಂಗಾರು ಪ್ರವೇಶ ಪಡೆದಿದೆ. ಆದರೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆಗಾಲದ ವಾತಾವರಣ ಇರಲಿಲ್ಲ.

Advertisement

ಸಾಮಾನ್ಯವಾಗಿ ರಾಜ್ಯ ಕರಾವಳಿಗೆ ಮುಂಗಾರು ಅಪ್ಪಳಿಸಿದ ವೇಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆಗಾಲದ ವಾತಾವರಣ ಇರುತ್ತದೆ. ದಿನವಿಡೀ ಮುಗಿಲಿನಿಂದ ಕೂಡಿ ಉತ್ತಮ ಮಳೆ ಸುರಿಯುತ್ತದೆ. ಆದರೆ ಕರಾವಳಿಯಲ್ಲಿ ರವಿವಾರ ಸಂಜೆಯವರೆಗೆ ಮಳೆಯ ಪ್ರಮಾಣ ಕಡಿಮೆ ಇತ್ತು.

ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ ಮಂಗಳೂರು, ಚಿತ್ರದುರ್ಗ ಪರಿಸರಕ್ಕೆ ಆವರಿಸಿದ ಮುಂಗಾರು ಮುಂದಿನ ಕೆಲ ದಿನಗಳಲ್ಲಿ ರಾಜ್ಯವ್ಯಾಪ್ತಿ ವ್ಯಾಪಿಸಲಿದೆ. ಮುಂದಿನ ಮೂರ್‍ನಾಲ್ಕು ದಿನಗಳಲ್ಲಿ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಈ ಬಾರಿಯ ಮುಂಗಾರು ಅವಧಿಯಲ್ಲಿ ವಾಡಿಕೆಯಂತೆ ಮಳೆಯಾಗುವ ನಿರೀಕ್ಷೆ ಇದೆ. ಕೇರಳ ಕರಾವಳಿ ತೀರಕ್ಕೆ ಮೇ 30ರಂದು ಮುಂಗಾರು ಪ್ರವೇಶ ಪಡೆದಿತ್ತು. ಮುಂದಿನ ಮೂರ್‍ನಾಲ್ಕು ದಿನಗಳಲ್ಲಿ ಸಾಮಾನ್ಯವಾಗಿ ರಾಜ್ಯಕ್ಕೂ ಆವರಿಸುತ್ತದೆ. ಆದರೆ ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಜೂನ್‌ 6ರ ಬಳಿಕವೇ ರಾಜ್ಯ ಕರಾವಳಿಗೆ ಮುಂಗಾರು ಪ್ರವೇಶವಾಗಿತ್ತು. ಆದರೆ ಈ ವರ್ಷ ತುಸು ಬೇಗ ಅಪ್ಪಳಿಸಿದೆ.

ಸಂಜೆ ಬಳಿಕ ಉತ್ತಮ ಮಳೆ
ದ.ಕ. ಜಿಲ್ಲೆಯಲ್ಲಿ ರವಿವಾರ ಸಂಜೆಯವರೆಗೆ ಮಳೆಯ ಅಬ್ಬರ ತುಸು ಕಡಿಮೆ ಇತ್ತು. ಮಂಗಳೂರಿನಲ್ಲಿ ರವಿವಾರ ತಡರಾತ್ರಿ ಮಳೆಯಾಗಿತ್ತು. ದಿನವಿಡೀ ಬಿಸಿಲು ಮತ್ತು ಮೋಡದ ವಾತಾವರಣ ಇತ್ತು. ಜಿಲ್ಲೆಯ ಕೆಲವು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಸೆಕೆಯ ವಾತಾವರಣ ಇದ್ದು, ಗರಿಷ್ಠ ತಾಪಮಾನದಲ್ಲಿಯೂ ಏರಿಕೆ ಕಂಡಿತ್ತು. ಮಂಗಳೂರಿನಲ್ಲಿ 32.6 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿ ವಾಡಿಕೆಗಿಂತ 0.6 ಡಿ.ಸೆ. ಮತ್ತು 25.6 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.2 ಡಿ.ಸೆ. ತಾಪಮಾನ ಏರಿಕೆ ಕಂಡಿತ್ತು.

4 ದಿನ “ಎಲ್ಲೋ ಅಲರ್ಟ್‌’
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಜೂ. 3 ರಿಂದ 6ರವರೆಗೆ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು “ಎಲ್ಲೋ ಅಲರ್ಟ್‌’ ಘೊಷಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next