Advertisement

Sandalwood: ಸಂಗೀತಮಯ ದೂರ ತೀರಯಾನ

07:34 PM Oct 23, 2024 | Team Udayavani |

“ದೂರ ತೀರ ಯಾನ’ ಹೀಗೊಂದು ಸಿನಿಮಾ ಆರಂಭವಾಗಿರುವುದು ನಿಮಗೆ ಗೊತ್ತಿರಬಹುದು. ಈಗ ಈ ಚಿತ್ರ ಮೊದಲ ಹಂತದ ಚಿತ್ರೀಕರಣ ಮುಗಿಸಿದೆ. ದೇವರಾಜ್‌ ಆರ್‌ ನಿರ್ಮಾಣದ “ದೂರ ತೀರ ಯಾನ’ ಈ ಚಿತ್ರವನ್ನು ಮಂಸೋರೆ ನಿರ್ದೇಶಿಸುತ್ತಿದ್ದಾರೆ.

Advertisement

ಚಿತ್ರತಂಡ ಹೇಳಿಕೊಂಡಂತೆ ಇದು ಹೊಸ ತಲೆಮಾರಿನ ಸಂಗೀತಮಯ ಪ್ರೇಮಕಥೆ.

ಈ ಸಿನಿಮಾದ ಮುಖ್ಯಪಾತ್ರದಲ್ಲಿ ವಿಜಯ್‌ ಕೃಷ್ಣ ಹಾಗೂ ಪ್ರಿಯಾಂಕಾ ಕುಮಾರ್‌ ನಟಿಸುತ್ತಿದ್ದು, ಶೇಖರ್‌ ಚಂದ್ರು ಅವರ ಛಾಯಾಗ್ರಹಣ, ಬಕ್ಕೇಶ್‌ ಮತ್ತು ಕಾರ್ತಿಕ್‌ ಸಂಗೀತ, ಜಯಂತ್‌ ಕಾಯ್ಕಿಣಿ, ಕವಿರಾಜ್‌, ಪ್ರಮೋದ್‌ ಮರವಂತೆ ಅವರ ಗೀತ ಸಾಹಿತ್ಯ, ನಾಗೇಂದ್ರ ಕೆ ಉಜ್ಜನಿ ಸಂಕಲನ, ಸರವಣ ಅವರ ಕಲಾ ನಿರ್ದೇಶನ ಹಾಗೂ ವಿವಿಡ್‌ ಐ ನಿರ್ಮಾಣ ವಿನ್ಯಾಸದ ಹೊಣೆ ಈ ಸಿನಿಮಾಕ್ಕಿದೆ.

ಈ ಸಿನಿಮಾದಲ್ಲಿ ಮುಖ್ಯವಾದ ವಿಶೇಷ ಪಾತ್ರಗಳಲ್ಲಿ ಹಲವರು ಪ್ರಮುಖ ನಟಿ-ನಟರು ನಟಿಸಿದ್ದಾರೆ. ಇದೊಂದು ದಾರಿಯಲ್ಲಿ ಸಾಗುತ್ತಾ ನಡೆಯುವ ಪ್ರೇಮಕಥೆ. ಚಿತ್ರದ ಮೊದಲ ಹತ್ತು ನಿಮಿಷ ಮಾತ್ರ ಬೆಂಗಳೂರಿನಲ್ಲಿ ನಡೆಯುತ್ತದೆ. ಉಳಿದೆಲ್ಲಾ ದಾರಿಯಲ್ಲಿ ಸಾಗುತ್ತದೆ. ಬೆಂಗಳೂರಿನಿಂದ ಗೋವಾಕ್ಕೆ ಹೊರಟ ಹುಡುಗ – ಹುಡುಗಿ ಹೊಸ ರೀತಿಯ ಪ್ರೀತಿಯನ್ನು ಕಂಡುಕೊಳ್ಳುವ ಕಥೆಯೂ ಹೌದು ಎನ್ನುವುದು ನಿರ್ದೇಶಕರ ಮಾತು.

Advertisement

Udayavani is now on Telegram. Click here to join our channel and stay updated with the latest news.

Next