Advertisement

ಮಂತ್ರಾಲಯದಲ್ಲಿ ರಾಯರ ಅದ್ದೂರಿ 401ನೇ ಪಟ್ಟಾಭಿಷೇಕ

12:36 PM Mar 04, 2022 | Team Udayavani |

ರಾಯಚೂರು:  ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 401ನೇ ಪಟ್ಟಾಭಿಷೇಕ ಮಹೋತ್ಸವ ವಿಜೃಂಭಣೆಯಿಂದ ಜರುಗುತ್ತಿದೆ. ಶ್ರೀ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು,  ರಾಯರ ಮೂಲ ಪಾದುಕೆಗಳಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಪಟ್ಟಾಭಿಷೇಕ ನೇರವೇರಿಸಿದರು. ಬಳಿಕ ಚಾಮರ ಸೇವೆ ಮಾಡಿದರು.

Advertisement

ಮೂಲ ಪಾದುಕೆಗಳನ್ನು ಚಿನ್ನದ ರಥದಲ್ಲಿರಿಸಿ ಮಠದ ಪ್ರಾಕಾರದಲ್ಲಿ ರಥೋತ್ಸವ ಜರುಗಿಸಲಾಯಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದರು. ಅವರನ್ನು ಮಠದಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ರಾಯರ ಮೂಲ ಬೃಂದಾವನ ದರ್ಶನ ಪಡೆದ ಬಳಿಕ ಪಟ್ಟಾಭಿಷೇಕ ಮಹೋತ್ಸವದಲ್ಲಿ ಭಾಗಿಯಾಗಿದರು. ಅವರನ್ನು ಶ್ರೀ ಮಠದ ಪೀಠಾಧಿಪತಿಗಳು ಗೌರವಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕಾಂಧ್ರ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಯಿಂದ ಭಕ್ತರು ಪಾಲ್ಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next