Advertisement

ಮಂತ್ರಾಲಯದಲ್ಲಿ ಮಧ್ಯಾರಾಧನೆ ವೈಭವ

07:47 AM Aug 06, 2020 | mahesh |

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ 349ನೇ ಆರಾಧನ ಮಹೋತ್ಸವದ ಮಧ್ಯಾರಾಧನೆಯು ಬುಧ ವಾರ ಸಕಲ ಧಾರ್ಮಿಕ ಕೈಂಕರ್ಯ ಗಳಿಂದ ನೆರವೇರಿತು.

Advertisement

ಈ ನಿಮಿತ್ತ ತಿರುಪತಿ ತಿರುಮಲ ದೇವಸ್ಥಾನದಿಂದ ತರಲಾದ ಶ್ರೀ ವೆಂಕಟೇಶ್ವರ ಸ್ವಾಮಿ ಶೇಷವಸ್ತ್ರಗಳನ್ನು ಬರಮಾಡಿ ಕೊಂಡ ಶ್ರೀಮಠದ ಪೀಠಾ ಧಿಪತಿ ಶ್ರೀ ಸುಬುಧೇಂದ್ರ ತೀರ್ಥರು, ಬಳಿಕ ಶ್ರೀರಾಯರ ಮೂಲ ಬೃಂದಾವನಕ್ಕೆ ಸಮರ್ಪಿಸಿದರು. ಅನಂತರ ಮೂಲ ಬೃಂದಾವನಕ್ಕೆ ಮಹಾ ಪಂಚಾಮೃತಾಭಿಷೇಕ ನೆರವೇರಿಸಿದರು. ಪ್ರಹ್ಲಾದ ರಾಜರ ಪಾದಪೂಜೆ ಬಳಿಕ ಶ್ರೀಮಠದ ಪ್ರಾಧಿಕಾರದಲ್ಲಿ ಶ್ರೀ ಪ್ರಹ್ಲಾದರಾಜ ಉತ್ಸವ ಮೂರ್ತಿ ಯನ್ನು ಚಿನ್ನದ ರಥದಲ್ಲಿಟ್ಟು ರಥೋತ್ಸವ ಮಾಡಲಾಯಿತು.

ಆರಾಧನೆಯ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು. ಮಠದ ಸಿಬಂದಿ, ವಿದ್ವಾಂಸರು, ಪಂಡಿತರು ಹಾಗೂ ಸೀಮಿತ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next