Advertisement

ಮಂತ್ರಾಲಯ: ಜೂ. 22ರಿಂದ ರಾಯರ ದರ್ಶನ ಪುನಾರಂಭ

01:47 PM Jun 17, 2021 | Team Udayavani |

ರಾಯಚೂರು: ಕೋವಿಡ್-19 ಎರಡನೇ ಅಲೆ ಹೆಚ್ಚಾಗಿದ್ದ ಕಾರಣ ಸ್ಥಗಿತಗೊಂಡಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ  ಜೂ.22ರಿಂದ ಪುನಾರಂಭಗೊಳ್ಳಲಿದೆ.

Advertisement

ಸರ್ಕಾರದ ಮಾರ್ಗಸೂಚಿಗಳನ್ವಯ ದರ್ಶನಕ್ಕೆ ಶ್ರೀ ಮಠದ ಆಡಳಿತ ಮಂಡಳಿ ಅವಕಾಶ ಮಾಡಿದೆ. ಬೆಳಗ್ಗೆ  6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ:ನಾಯಕತ್ವ ಬದಲಾವಣೆ ಬೇಡ ಆದರೆ ಸಂಪುಟ ಪುನಾರಚನೆ ಮಾಡಿ: ಅರುಣ್ ಸಿಂಗ್ ಗೆ ಕೆಲ ಶಾಸಕರ ಬೇಡಿಕೆ

ಮಠಕ್ಕೆ ಬರಲಾಗದ ಭಕ್ತರು //www.srsmatha.org/online ಮೂಲಕ ರಾಯರ ದರ್ಶನ ಪಡೆಯಬಹುದು ಎಂದು ಮಠದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next