Advertisement

ಮೇ 1ರಿಂದ‌ ಭಕ್ತರಿಗೆ ಮಂತ್ರಾಲಯ ರಾಯರ ದರ್ಶನ ನಿಷೇಧ

09:36 PM Apr 30, 2021 | Team Udayavani |

ರಾಯಚೂರು: ಮಂತ್ರಾಲಯ ಕ್ಷೇತ್ರದಲ್ಲಿ ಸ್ಥಳೀಯವಾಗಿ ಲಾಕ್‌ಡೌನ್‌ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಮೇ 1ರಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನ ದರ್ಶನ ನಿರ್ಬಂಧಿಸಲಾಗಿದೆ.

Advertisement

ತೀರ್ಥ ಪ್ರಸಾದಗಳಿಗೆ ಅವಕಾಶವಿರುವುದಿಲ್ಲ. ರಾಯರ ಭಕ್ತರು ಮಂತ್ರಾಲಯ ಕ್ಷೇತ್ರಕ್ಕೆ ಮುಂದಿನ ಸೂಚನೆ ನೀಡುವವರೆಗೂ ಆಗಮಿಸಬಾರದು. ಶ್ರೀ ಮಠದಲ್ಲಿ ಎಂದಿನಂತೆ ಪೂಜಾ ಕೈಂಕರ್ಯಗಳು, ಪಂಚಾಮೃತಾಭಿಷೇಕ, ರಥೋತ್ಸವಾದಿ ಸೇವೆಗಳ ಜರುಗಲಿವೆ.

ಭಕ್ತರು ಆನ್‌ಲೈನ್‌ ಮೂಲಕ ಸೇವೆಗಳ ಮೂಲಕ ರಾಯರ ಕೃಪೆಗೆ ಪಾತ್ರರಾಗಬಹುದು ಎಂದು ಶ್ರೀಮಠದ ವ್ಯವಸ್ಥಾಪಕ ವೆಂಕಟೇಶ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ :ದೆಹಲಿಯಲ್ಲಿ ನಕಲಿ ರೆಮಿ ಡೆಸಿವಿರ್ ಮಾರಾಟ ಮಾಡುತ್ತಿದ್ದ ಏಳು ಜನರ ಬಂಧನ..!

Advertisement

Udayavani is now on Telegram. Click here to join our channel and stay updated with the latest news.

Next