Advertisement

ಮಂತ್ರಾಲಯ: ಯುವ ಬ್ರಿಗೇಡ್ ನಿಂದ ತುಂಗಾತೀರ ಸ್ವಚ್ಛತಾ ಕಾರ್ಯ

12:28 PM Mar 12, 2022 | Team Udayavani |

ರಾಯಚೂರು: ಮಂತ್ರಾಲಯದಲ್ಲಿ ತುಂಗಭದ್ರಾ ನದಿ ತೀರದಲ್ಲಿ ಯುವಬ್ರಿಗೇಡ್ ನಿಂದ ತುಂಗಾರಾಧನೆ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಯುತ್ತಿದೆ.

Advertisement

ಎರಡು ದಿನಗಳ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿದ್ದು, ನೂರಾರು ಸ್ವಯಂಸೇವಕರು ಪಾಲ್ಗೊಂಡಿದ್ದಾರೆ. ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಶನಿವಾರ ಬೆಳಗಿನ ಜಾವದಿಂದಲೇ ಸ್ವಚ್ಛತೆಗೆ ಚಾಲನೆ‌ ನೀಡಲಾಯಿತು.

ನದಿಯಲ್ಲಿ ಅಪಾರ ಪ್ರಮಾಣದ ತ್ಯಾಜ್ಯ, ಕೊಳೆತ ಬಟ್ಟೆಗಳು ಸೇರಿದಂತೆ ಸಾಕಷ್ಟು ತ್ಯಾಜ್ಯ ಸಂಗ್ರಹವಾಗಿದ್ದು, ವಿಲೇವಾರಿ ಮಾಡಲಾಯಿತು. ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಭೇಟಿ ನೀಡಿ ಬ್ರಿಗೇಡ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next