Advertisement

Mantralayam; ಆಂಧ್ರ ಗವರ್ನರ್ ಅಬ್ದುಲ್ ನಜೀರ್ ರಿಂದ ರಾಯರಿಗೆ ವಿಶೇಷ ಪೂಜೆ

11:03 PM Aug 31, 2023 | Team Udayavani |

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ‌ ಮಹೋತ್ಸವದ ಪ್ರಯುಕ್ತ ಗುರುವಾರ ನಡೆದ ಪೂರ್ವಾರಾಧನೆ ಆಗಮಿಸಿದ ಆಂಧ್ರಪ್ರದೇಶದ ರಾಜ್ಯಪಾಲರಾದ ಜಸ್ಟಿಸ್ ಅಬ್ದುಲ್ ನಜೀರ್ ರಾಯರ ಮೂಲ ಬೃಂದಾವನಕ್ಕೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು.

Advertisement

ಶ್ರೀಮಠದಿಂದ ರಾಜ್ಯಪಾಲರಿಗೆ ಪೂರ್ಣಕುಂಭ ಕಳಸದಿಂದ ಸ್ವಾಗತ ಕೋರಲಾಯಿತು. ಬಳಿಕ ವಾದ್ಯಮೇಳದೊಂದಿಗೆ ಅವರನ್ನು ಬರಮಾಡಿಕೊಳ್ಳಲಾಯಿತು‌. ರಾಯರ ದರ್ಶನ ಪಡೆದ ಬಳಿಕ ಶ್ರೀ ರಾಘವೇಂದ್ರಾನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡರು. ಈ ವೇಳೆ ಮಾತನಾಡಿದ ಅವರು ರಾಯರ ಮಹಿಮೆಯನ್ನು ಕೊಂಡಾಡಿದರು. ಈ ಸ್ಥಳ ಸರ್ವ ಜನಾಂಗದ ಶಾಂತಿಯ ತೋಟದಂತೆ ಭಾಸವಾಗುತ್ತಿದೆ ಎಂದು ವರ್ಣಿಸಿದರು. ಈ ವೇಳೆ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ರಾಜ್ಯಪಾಲರನ್ನು ಸನ್ಮಾನಿಸಿ ಗೌರವಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next