Advertisement

Manvi: ಮಂತ್ರಾಲಯಕ್ಕೆ ತೆರಳಿದ್ದ ಬಸ್ ಅಪಘಾತ; 31ಕ್ಕೂ ಹೆಚ್ಚು ಜನರಿಗೆ ಗಾಯ

08:27 PM Jun 22, 2023 | Team Udayavani |

ಮಾನ್ವಿ: ಹೊರವಲಯದ ಸಿಂಧನೂರು ರಸ್ತೆಯ ನಂದಿಹಾಳ ಗ್ರಾಮದ ಹತ್ತಿರ ಮಂತ್ರಾಲಯದಿಂದ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಅಪಘಾತಗೊಂಡಿದ್ದು, 31 ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಗುರುವಾರ ಸಂಭವಿಸಿದೆ.

Advertisement

ಬೆಂಗಳೂರಿನ ಕುರುಬರಹಳ್ಳಿಯ ಚಾಲಕರ ಸಂಘದ 30ಕ್ಕೂ ಹೆಚ್ಚು ಸದಸ್ಯರು ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ನಂತರ ಮರಳಿ ಬೆಂಗಳೂರಿಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಢಿಕ್ಕಿ ಹೊಡೆದು ರಸ್ತೆ ಪಕ್ಕದ ಜಮೀನಿಗೆ ಉರಳಿದೆ. ಬಸ್ ನಲ್ಲಿದ್ದ 31 ಜನಕ್ಕೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಚಾಲಕನಿಗೆ ಹೊಟ್ಟೆಯ ಮೇಲೆ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿ ಐ ವೀರಭದ್ರಯ್ಯ ಹಿರೇಮಠ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ವಿಚಾರಿಸಿ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next