Advertisement

Manvi: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

08:46 AM Sep 15, 2024 | Team Udayavani |

ಮಾನ್ವಿ: ಪಟ್ಟಣದ ರಾಯಚೂರು ರಸ್ತೆಯಲ್ಲಿನ  ಹೋರವಲಯದಲ್ಲಿನ ಜಮೀನೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ.

Advertisement

ಮೃತನನ್ನು ತಾಲೂಕಿನ ಸೀಕಲ್ ಗ್ರಾಮದ ಚಾಪುಡಿ ಕ್ಯಾಂಪ್ ನಿವಾಸಿ ಜಿಂದಪ್ಪ ವ.38 ಎಂದು ಗುರುತಿಸಲಾಗಿದೆ.

ಮಾಹಿತಿ ದೊರೆಯುತ್ತಿದಂತೆ ಮಾನ್ವಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮೃತ ಜಿಂದಪ್ಪ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕಳೆದ ಅನೇಕ ವರ್ಷಗಳಿಂದ ಮಾನ್ವಿ ಪಟ್ಟಣದ ಗ್ಯಾಸ್ ಎಜನ್ಸಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದ ಎಂದು ಹೇಳುತ್ತಿದ್ದು ಅತ್ಮಹತ್ಯಗೆ ನಿಖರ ಕಾರಣ ತಿಳಿದು ಬಂದಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next