Advertisement

ಮಾನ್ವಿ: ಮಳೆಯಿಂದ ಭತ್ತದ ಬೆಳೆಗೆ ಹಾನಿ

03:09 PM Nov 18, 2021 | Team Udayavani |

ಮಾನ್ವಿ: ತಾಲೂಕಿನಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಗೆ ಭತ್ತದ ಬೆಳೆ ನೆಲಕ್ಕೆ ಬಿದ್ದಿರುವುದರಿಂದ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ.

Advertisement

ರಾಧಾ-ಕೃಷ್ಣ ಕ್ಯಾಂಪಿನಲ್ಲಿ ಭತ್ತ ಬೆಳೆದ ರೈತ ಜಿ.ಉಮಪತಿ ನಾಯಕ ಮಾತನಾಡಿ, ಸುಮಾರು 15 ಎಕರೆಯಲ್ಲಿ ಭತ್ತವನ್ನು ಬೆಳೆದಿದ್ದು ಒಂದು ಎಕರೆಯಲ್ಲಿ ಭತ್ತ ಬೆಳೆಯಲು ಸುಮಾರು 20 ಸಾವಿರ ಖರ್ಚು ಮಾಡಲಾಗಿದೆ. ಸುತ್ತಲಿನ ನೂರಾರು ಎಕರೆಯಲ್ಲಿ ಬೆಳೆದಿರುವ ಭತ್ತದ ಬೆಳೆ ಸಂಪೂರ್ಣ ನಾಶವಾಗಿದ್ದು, ಭತ್ತದ ಬೆಳೆಗೆ ರೈತರು ವಿಮೆ ಮಾಡಿಸಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳಿಗೆ, ಕೃಷಿ ಇಲಾಖೆ ಅಧಿಕಾರಿಗಳಿಗೆ, ವಿಮಾ ಕಂಪನಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿಲ್ಲ ಎಂದು ಆರೋಪಿಸಿದರು.

ತಾಲೂಕು ಸಹಾಯಕ ಕೃಷಿ ನಿರ್ದೇಶಕ ಹುಸೇನ್‌ ಸಾಬ್‌ ಮಾತನಾಡಿ, ತಾಲೂಕಿನಲ್ಲಿ 22 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. 25 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ ಬೆಳೆಯಲಾಗಿದೆ. ಮೋಡ ಮುಸುಕಿದ ವಾತಾವರಣದಿಂದ ಕೂಡಿದ ಹವಾಮಾನವಿದ್ದು, ಕೆಲವು ಭಾಗದಲ್ಲಿ ಮಳೆ ಸುರಿಯುತ್ತಿರುವುದರಿಂದ ಭತ್ತದ ಬೆಳೆಗೆ ಹಾನಿಯಾಗಿದೆ. ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆ ವತಿಯಿಂದ ಜಂಟಿಯಾಗಿ ಬೆಳೆ ಸಮೀಕ್ಷೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. ನಂತರ ಬೆಳೆಹಾನಿಗೆ ಸರಕಾರದಿಂದ ಪರಿಹಾರ ದೊರೆಯಲಿದೆ ಎಂದು ತಿಳಿಸಿದರು

Advertisement

Udayavani is now on Telegram. Click here to join our channel and stay updated with the latest news.

Next