Advertisement

ಮಾನ್ವಿ ತಾಲೂಕು ಸಮ್ಮೇಳನ: ಇಂದು ಪೂರ್ವಭಾವಿ ಸಭೆ

03:48 PM Feb 07, 2021 | Team Udayavani |

ಮಾನ್ವಿ: ತಾಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಚರ್ಚಿಸಲು ಫೆ.7ರಂದು ಪಟ್ಟಣದ ತಾಪಂ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಮಹ್ಮದ್‌ ಮಜೀಬ್‌ ತಿಳಿಸಿದ್ದಾರೆ.

Advertisement

ಫೆ.7ರಂದು ಬೆಳಗ್ಗೆ 11ಗಂಟೆಗೆ ತಾಪಂ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿರುವ ಶಾಸಕ ರಾಜಾವೆಂಕಟಪ್ಪ ನಾಯಕ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ:ಹೆದ್ದಾರಿ ಬಂದ್‌ಗೆ ವ್ಯಾಪಕ ಬೆಂಬಲ

ಸಭೆಯಲ್ಲಿ ಸಮ್ಮೇಳನದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲಾಗುವುದು. ಆದ್ದರಿಂದ ತಾಲೂಕಿನ ಸಾಹಿತ್ಯಾಭಿಮಾನಿಗಳು, ಕನ್ನಡಾಭಿಮಾನಿಗಳು, ಎಲ್ಲಾ ಸಂಘಸಂಸ್ಥೆಗಳ ಮುಖಂಡರು, ಪರಿಷತ್‌ನ ಅಜೀವ ಸದಸ್ಯರು, ಪದಾಧಿ ಕಾರಿಗಳು ಆಗಮಿಸಿ ಸಭೆ ಯಶಸ್ವಿಗೊಳಿಸಬೇಕು. ಕಾರ್ಯಕ್ರಮಕ್ಕೆ ಸಂಬಂ ಧಿಸಿದಂತೆ ಸಲಹೆ, ಸೂಚನೆಗಳನ್ನು ನೀಡಬೇಕು. 9ನೇ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next