Advertisement

ನಾವಷ್ಟೇ ಅಲ್ಲಾ, ಇನ್ನೂ ಐದಾರು ಮಂದಿ ನ್ಯಾಯಾಲಯಕ್ಕೆ ಹೋಗುತ್ತಾರೆ: ಸಚಿವ ಸುಧಾಕರ್

11:07 AM Mar 06, 2021 | Team Udayavani |

ಬೆಂಗಳೂರು: ಕೆಲವರು ಮಾಧ್ಯಮಗಳ ಮೂಲಕ ತೇಜೋವಧೆ ಮಾಡಿಸುತ್ತಿದ್ದಾರೆ. ಯಾವುದೇ ವಿಚಾರ ಬಂದಾಗ ಪರಾಮರ್ಶಿಸಿ 24 ಗಂಟೆ ಬೇಕಾದರೂ ಮಾಧ್ಯಮದಲ್ಲಿ ಹಾಕಿ. ಸತ್ಯವಂತರಿಗೆ ಭಯ ಇಲ್ಲ. ಆದರೆ ಹಿಟ್ ಅಂಡ್ ರನ್ ಮಾಡುವ ಜನರಿಗೆ ಭಯ ಬೀಳಬೇಕಾಗಿದೆ. ನಾವಷ್ಟೇ ಅಲ್ಲಾ ಇನ್ನೂ ಐದಾರು ಜನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುತ್ತಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.

Advertisement

ತಮ್ಮ ವಿರುದ್ಧ ಯಾವುದೇ ಆಕ್ಷೇಪಾರ್ಹ ಸುದ್ದಿಗಳನ್ನು ಪ್ರಸಾರ ಮಾಡದಿರುವಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರ್ಟ್ ಮೊರೆ ಹೋಗಿರುವ ವಿಚಾರದ ಬಗ್ಗೆ ಸ್ಪಷ್ಟೀಕರಣ ಅವರು ನೀಡಿದರು.

ನಾವು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದರೆ ಶಿಕ್ಷೆಯಾಗಲಿ. ಆದರೆ ನಾವು ಯಾವುದೇ ತಪ್ಪು ಮಾಡಿಲ್ಲ, ನಾವು ಮಾಡುವುದೂ ಇಲ್ಲ ಎಂದರು.

ಇದನ್ನೂ ಓದಿ:ರಾಜಕೀಯ ಷಡ್ಯಂತ್ರ ನಡೆಯುತ್ತಿದೆ, ಅದಕ್ಕಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಸಚಿವ ಸುಧಾಕರ್

ಜಾರಕಿಹೊಳಿ ಪ್ರಕರಣದಲ್ಲಿ ಮೊದಲ ದಿನ ಸಂತ್ರಸ್ತೆ ಎಂದು ಹೇಳಿದ್ದಾರೆ. ಆದರೆ ಅವಳು ಇಲ್ಲಿಯವರೆಗೆ ಯಾಕೆ ಮುಂದೆ ಬಂದಿಲ್ಲ? ಆಕೆಯ ಕುಟುಂಬ ಕೂಡ ಮುಂದೆ ಬಂದಿಲ್ಲ. ಅವಳು ಯಾರು ಏನೂ ಎನ್ನುವುದೂ ಗೊತ್ತಿಲ್ಲ. ನಮ್ಮನ್ನು ಯಾಕೆ ಟಾರ್ಗೆಟ್ ಮಾಡುತ್ತಿದ್ದಾರೆ ಎನ್ನುವುದೂ ಗೊತ್ತಿಲ್ಲ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next