Advertisement

ಬಿಎಸ್ ವೈ ಗೆ ಸಿದ್ದಗಂಗಾ ಸೇರಿ ಹಲವು ಶ್ರೀಗಳಿಂದ ಸಾಂತ್ವನ

05:20 PM Feb 02, 2022 | Team Udayavani |

ಬೆಂಗಳೂರು :ಮೊಮ್ಮಗಳನ್ನು ಕಳೆದುಕೊಂಡು ದುಃಖತಪ್ತರಾಗಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ತುಮಕೂರಿನ ಸಿದ್ದಗಂಗಾ ಶ್ರೀಗಳು ಸೇರಿದಂತೆ ಲಿಂಗಾಯತ ಮಠಾಧೀಶರು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.

Advertisement

ಯಡಿಯೂರಪ್ಪ ನೀವಾಸಕ್ಕೆ ಭೇಟಿ ನೀಡಿರುವ ಸಿದ್ದಗಂಗಾ ಶ್ರೀಗಳು, ಕನಕಪುರ ದೇಗುಲಮಠ, ಶಿವಗಂಗೆ ಮೇಲಣ ಗವಿಮಠ, ಶಿವಗಂಗೆ ಹೊನ್ನಮ್ಮ ಗವಿಮಠ, ಬೆಟ್ಟಹಳ್ಳಿ, ಹಾಗೂ ಬಂಡೆಮಠದ ಶ್ರೀಗಳು ಸಾಂತ್ವನ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಯಡಿಯೂರಪ್ಪ ಅವರ ಮೊಮ್ಮಗಳು ಸೌಂರ‍್ಯ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅಫರ‍್ಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಪ್ರಸವದ ನಂತರದ ಖಿನ್ನತೆಯ ಕಾರಣಕ್ಕೆ ಅವರು ಸಾವಿಗೆ ಶರಣಾಗಿದ್ದರು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪತಿ ನೀರಜ್ ನೀಡಿದ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ.

ಮೊಮ್ಮಗಳ ಸಾವಿನ ಹಿನ್ನೆಲೆಯಲ್ಲಿ ಯಡಿಯೂರಪ್ಪ ದುಃಖತಪ್ತರಾಗಿದ್ದಾರೆ. ಪ್ರತಿಪಕ್ಷದ ನಾಯಕರು ಸೇರಿದಂತೆ ಅನೇಕರು ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next