Advertisement

ಶಿವರಾಜ್ ಕುಮಾರ್ @60: ಶಿವಣ್ಣನ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರ

01:12 PM Jul 12, 2022 | Team Udayavani |

ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟಿದ ದಿನ. 60ನೇ ವಸಂತಕ್ಕೆ ಕಾಲಿಟ್ಟ ಶಿವಣ್ಣನ ಬರ್ತ್ ಡೇಯನ್ನು ಅಭಿಮಾನಿಗಳು ವಿವಿಧ ರೀತಿಯಲ್ಲಿ ಆಚರಿಸಿದ್ದಾರೆ. ಇದೇ ವೇಳೆ ಶಿವಣ್ಣ ಅಭಿನಯದ ಕೆಲವು ಚಿತ್ರಗಳ ಪೋಸ್ಟರ್ ಬಿಡುಗಡೆಯಾಗಿದೆ.

Advertisement

ಇದೇ ಚಿತ್ರರಂಗ, ರಾಜಕೀಯ ಕ್ಷೇತ್ರದ ಹಲವರು ಶಿವರಾಜ್ ಕುಮಾರ್ ಅವರಿಗೆ ಶುಭಕೋರಿದ್ದಾರೆ.

ಈ ಬಗ್ಗೆ ಕೂ ಮಾಡಿರುವ ಕೆಜಿಎಫ್ ಖ್ಯಾತಿಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್, ನಮ್ಮೆಲ್ಲರ ಹೆಮ್ಮೆಯ ನಟ, ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮ್ಮ ಕಲಾ ಸೇವೆ ಸದಾ ಸ್ಫೂರ್ತಿ. ನಿಮ್ಮ ನಿರಂತರ ಕಲಾಸೇವೆಗಾಗಿ ಹೊಂಬಾಳೆ ಫಿಲಂಸ್ ತಂಡದಿಂದ ಶುಭ ಹಾರೈಕೆಗಳು ಎಂದಿದೆ.

Koo App

ನಮ್ಮೆಲ್ಲರ ಹೆಮ್ಮೆಯ ನಟ, ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮ್ಮ ಕಲಾ ಸೇವೆ ಸದಾ ಸ್ಫೂರ್ತಿ. ನಿಮ್ಮ ನಿರಂತರ ಕಲಾಸೇವೆಗಾಗಿ ಹೊಂಬಾಳೆ ಫಿಲಂಸ್ ತಂಡದಿಂದ ಶುಭ ಹಾರೈಕೆಗಳು. @NimmaShivanna #HBDShivanna

Advertisement

Hombale Films (@HombaleFilms) 12 July 2022

ಕನ್ನಡ ಚಿತ್ರರಂಗದ ಖ್ಯಾತ ಕಲಾವಿದ, ಕರುನಾಡ ಚಕ್ರವರ್ತಿ ಡಾ. ಶಿವರಾಜಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ, ತಮ್ಮ ನೇತೃತ್ವದಲ್ಲಿ ಕನ್ನಡ ಚಿತ್ರೋದ್ಯಮ ಇನ್ನೂ ಹೆಚ್ಚು ಯಶಸ್ಸು ಕೀರ್ತಿ ಗಳಿಸಲಿ ಎಂದು ಹಾರೈಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕೂ ಮಾಡಿದ್ದಾರೆ.

ನಟಸಾರ್ವಭೌಮನ ಪುತ್ರ, ಕರುನಾಡ ಚಕ್ರವರ್ತಿ, ಸಿನಿರಂಗದಲ್ಲಿ 35 ವರ್ಷ ಪೂರೈಸಿ, 125ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ, ಇಂದಿಗೂ ನಮ್ಮೆಲ್ಲರ ನೆಚ್ಚಿನ ನಟನಾಗಿ 60ರ ವಸಂತಕ್ಕೆ ಕಾಲಿಡುತ್ತಿರುವ, ಹ್ಯಾಟ್ರಿಕ್ ಹೀರೋ ಶ್ರೀ ಶಿವರಾಜ್ ಕುಮಾರ್ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ದೀರ್ಘಾಯುಷ್ಯ ಕೊಟ್ಟು ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಮುರುಗೇಶ್ ನಿರಾಣಿ ಕೂ ಮಾಡಿದ್ದಾರೆ.

Koo App

ನಟಸಾರ್ವಭೌಮನ ಪುತ್ರ, ಕರುನಾಡ ಚಕ್ರವರ್ತಿ, ಸಿನಿರಂಗದಲ್ಲಿ 35 ವರ್ಷ ಪೂರೈಸಿ, 125ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ, ಇಂದಿಗೂ ನಮ್ಮೆಲ್ಲರ ನೆಚ್ಚಿನ ನಟನಾಗಿ 60ರ ವಸಂತಕ್ಕೆ ಕಾಲಿಡುತ್ತಿರುವ, ಹ್ಯಾಟ್ರಿಕ್ ಹೀರೋ ಶ್ರೀ ಶಿವರಾಜ್ ಕುಮಾರ್ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ದೀರ್ಘಾಯುಷ್ಯ ಕೊಟ್ಟು ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ.

Dr. Murugesh R Nirani (@murugesh_nirani) 12 July 2022

ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್ ಅವರಿಗೆ ಹುಟ್ಟುಹಬ್ಬದ ಹೃತ್ಪೂರ್ವಕ ಶುಭಾಶಯಗಳು. ಭಗವಂತ ತಮಗೆ ಉತ್ತಮ ಕೃಪೆ ಸದಾ ತಮ್ಮ ಮೇಲಿರಲಿ, ತಮ್ಮಿಂದ ಕನ್ನಡ ಚಿತ್ರರಂಗದ ಕೀರ್ತಿ ಮತ್ತಷ್ಟು ಹೆಚ್ಚಲಿ ಎಂದು ಸಚಿವ ಕೆ.ಗೋಪಾಲಯ್ಯ ಹಾರೈಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next