Advertisement

ಕೌಟುಂಬಿಕ ಕಲಹ ನದಿಗೆ ಹಾರಿದ ತಾಯಿ ಮಗಳು

10:10 AM Aug 27, 2019 | Team Udayavani |

ಮಂಡ್ಯ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದ ಗ್ರಹಿಣಿಯೊಬ್ಬಳು ತನ್ನ ಮಗಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಸಮೀಪದ ಗಂಜಾಂನಲ್ಲಿ ಸೋಮವಾರ ಸಂಭವಿಸಿದೆ.

Advertisement

ಘಟನೆಯಲ್ಲಿ ತಾಯಿ ಕುಸುನಾ ಬಾನು ಅವರನ್ನು ರಕ್ಷಣೆ ಮಾಡಲಾಗಿದ್ದು ಮಗಳು ಜಯಿಮಾ ಕೌಸರ್(10) ನದಿ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದ್ದು ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರಿನ ಎನ್.ಆರ್.ಮೊಹಲ್ಲ ನಿವಾಸಿಯಾದ ಕುಸುನಾ ಬಾನು ಮನೆಯಲ್ಲಿಯ ಕೌಟುಂಬಿಕ ಹಿನ್ನಲೆಯಲ್ಲಿ ತನ್ನ ಮಗಳೊಂದಿದೆ ಗಂಜಾಂನಲ್ಲಿರುವ ಸಂಗಮದಲ್ಲಿ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಅದೃಷ್ಟವಶಾತ್ ತಾಯಿಯನ್ನು ರಕ್ಷಿಸಿದ ಸ್ಥಳೀಯರು ಮಗಳನ್ನು ರಕ್ಷಣೆ ಮಾಡಲು ಸಾಧ್ಯವಾಗದೆ ನದಿ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದ್ದಾಳೆ. ಕೊಚ್ಚಿ ಹೋದ ಶವಕ್ಕಾಗಿ ಅಗ್ನಿ ಶಾಮಕ ಸಿಬ್ಬಂದಿ, ಸ್ಥಳೀಯ ಈಜುಗಾರರಿಂದ ಹುಡುಕಾಟ ನಡೆಯುತ್ತಿದೆ.

ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಠಾಣೆ ಪೋಲೀಸರ ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next