Advertisement

Maragur; ನೆಲಕ್ಕಪ್ಪಳಿಸಿದ ವೆದರ್ ಮಾನಿಟರಿಂಗ್ ಸಾಧನ: ಆತಂಕ ಬೇಡ ಎಂದ ಜಿಲ್ಲಾಡಳಿತ

11:27 AM Aug 02, 2024 | keerthan |

ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಮರಗೂರ ಬಳಿ ಹವಾಮಾನ ಮಾಹಿತಿ ಸಂಗ್ರಹಕ್ಕೆ ಹಾರಿಸಿರುವ ಪ್ಯಾರಾಚ್ಯೂಟ್ ಮಾದರಿ ಬಾಹ್ಯಾಕಾಶ ಸಾಧನ ನೆಲಕ್ಕೆ ಅಪ್ಪಳಿಸಿದ ಘಟನೆ ಶುಕ್ರವಾರ (ಆ.02) ನಡೆದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

Advertisement

ಸ್ಥಾನಿಕ ಹವಾಮಾನ ಅಧ್ಯಯನಕ್ಕಾಗಿ ಮಾಹಿತಿ ಸಂಗ್ರಹಿಸಲು ಬೆಂಗಳೂರಿನ ಇಸ್ರೋ ಕೇಂದ್ರದಿಂದ ಕೆಲ ದಿನಗಳ ಹಿಂದೆ ವಿಶೇಷ ಸಾಧನವನ್ನು ಹಾರಿ ಬಿಡಲಾಗಿದೆ. ಸದರಿ ಸಾಧನ ಸ್ಥಾನಿಕ ಹವಾಮಾನ ಮಾಹಿತಿಯನ್ನು ಇಸ್ರೋ ಕೇಂದ್ರಕ್ಕೆ ರವಾನಿಸಲಿದೆ. ಹೈದರಾಬಾದ್ ಇಸ್ರೋ ನಿರ್ವಹಣಾ ಕೇಂದ್ರದಿಂದ ಈ ಸಾಧನವನ್ನು ನಿಯಂತ್ರಣ ಮಾಡಲಾಗುತ್ತಿತ್ತು.

ಲೋ‌ ಲ್ಯಾಟಿಟ್ಯೂಡ್ ವೆದರ್ ಮಾನಿಟರಿಂಗ್ ಮಾಡಲು ಹಾರಿ ಬಿಡಲಾಗಿರುವ ಈ ಸಾಧನ ಮರಗೂರ ಬಳಿ ಜಮೀನಿನಲ್ಲಿ ಬಿದ್ದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಇಸ್ರೋ ಬಾಹ್ಯಾಕಾಶ ಸಾಧನ ಪತನದಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಬಾಹ್ಯಾಕಾಶ ಸಾಧನ ಪತನದಿಂದ ಆಗಿರುವ ನಷ್ಟ, ವ್ಯತಿರಿಕ್ತ ಪರಿಣಾಮಗಳ ಕುರಿತು ತಜ್ಞರ ಭೇಟಿ ಬಳಿಕವೇ ಮಾಹಿತಿ ಲಭ್ಯವಾಗಲಿದೆ.

Advertisement

ಆತಂಕ ಪಡಬೇಕಿಲ್ಲ: ಡಿ.ಸಿ. ಭೂಬಾಲನ್

ಪೆಲೋಡ್ ಪತನದ ಕುರಿತು ಸಾರ್ವಜನಿಕರು ಆತಂಕ ಪಡಬೇಕಿಲ್ಲ ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ವಿಜಯಪುರ ಜಿಲ್ಲಾಧಿಕಾರಿ ಭೂಬಾಲನ್, ಕೇಂದ್ರ ಸರ್ಕಾರದ ಪರಮಾಣು ಶಕ್ತಿ ಇಲಾಖೆಯ ಅಧೀನದಲ್ಲಿನ ಹೈದರಾಬಾದ್ ನ ಟಾಟಾ ಮೂಲಭೂತ ಸಂಶೋಧನಾ ಸಂಸ್ಥೆ (ಟಾಟಾ ಇನ್ ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರೀಸರ್ಚ್) ಹವಾಮಾನ ಹಾಗೂ ವಾತಾವರಣ ಅಧ್ಯಯನಕ್ಕಾಗಿ ಉಡಾವಣೆ ಮಾಡಿದ್ದ ಪೆಲೋಡ್ ಹೆಸರಿನ ಹವಾಮಾನ ಅಧ್ಯಯನಾಶೀಲ ವೈಜ್ಞಾನಿಕ ಉಪಕರಣ ಪ್ಯಾರಾಚೂಟ್ ನ ನೆರವಿನಿಂದ ಚಡಚಣ ತಾಲೂಕಿನ ಗ್ರಾಮವೊಂದರ ಜಮೀನಿನಲ್ಲಿ ಬಂದು ಇಳಿದಿದೆ ಎಂದಿದ್ದಾರೆ.

ಜಿಲ್ಲಾಡಳಿತ ಈ ಕುರಿತು ಸಂಬಂಧಿಸಿದ ಸಂಸ್ಥೆಯನ್ನು ಸಂಪರ್ಕಿಸಿ ಈಗಾಗಲೇ ಮಾಹಿತಿ ಒದಗಿಸಿದೆ. ಸಂಸ್ಥೆಯ ಅಧಿಕಾರಿಗಳ ತಂಡ ಸದ್ಯದಲ್ಲೇ ವಿಜಯಪುರಕ್ಕೆ ಆಗಮಿಸಲಿದೆ. ಜಮೀನಿನಲ್ಲಿ ಬಿದ್ದಿರುವ ಪ್ಯಾರಾಚ್ಯೂಟ್ ಹಾಗೂ ಪೆಲೋಡ್, ಅದಕ್ಕೆ ಸಬಂಧಿಸಿದ ಸಾಧನಾ ಸಲಕರಣೆಗಳನ್ನು ತೆಗೆದುಕೊಂಡು ಹೋಗಲಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next