Advertisement

Maratha ಮೀಸಲಾತಿ: ಜ.20ರಿಂದ ನಿರಶನದ ಬೆದರಿಕೆಯೊಡ್ಡಿದ ಮನೋಜ್‌ ಜಾರಂಗೆ

08:12 PM Dec 24, 2023 | Team Udayavani |

ಮುಂಬೈ: ಮರಾಠ ಸಮುದಾಯದ ಮೀಸಲಾತಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿರುವ ಕೋಟಾ ಹೋರಾಟಗಾರ ಮನೋಜ್‌ ಜಾರಂಗೆ, ಜ.20ರಿಂದ ಮುಂಬೈನ ಆಜಾದ್‌ ಮೈದಾನದಲ್ಲಿ ಅನಿರ್ದಿಷ್ಟಾವಧಿ ನಿರಶನ ನಡೆಸುವುದಾಗಿ ಘೋಷಿಸಿದ್ದಾರೆ.

Advertisement

ಮೀಸಲಾತಿ ಬೇಡಿಕೆಯನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ಜಾರಂಗೆ ಅವರು ಡಿ.24ರ ಗಡುವು ನೀಡಿದ್ದರು. ಆದರೆ, ಅದು ಈಡೇರದ ಹಿನ್ನೆಲೆಯಲ್ಲಿ ಮತ್ತೆ ಉಪವಾಸ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಶನಿವಾರ ಮರಾಠವಾಡ ಪ್ರಾಂತ್ಯದ ಬೀಡ್‌ ಜಿಲ್ಲೆಯಲ್ಲಿ ಬೃಹತ್‌ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಜ.20ರಿಂದಲೇ ನಿರಶನ ಆರಂಭಿಸುತ್ತೇನೆ ಎಂದಿದ್ದಾರೆ. ಇನ್ನೊಂದೆಡೆ, ಹೋರಾಟದಿಂದ ಹಿಂದೆ ಸರಿಯುವಂತೆ ಮರಾಠ ಸಮುದಾಯಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಆಗ್ರಹಿಸಿದ್ದಾರೆ. ಮೀಸಲಾತಿ ಬಗ್ಗೆ ಸಲ್ಲಿಸಿರುವ ಕ್ಯುರೇಟಿವ್‌ ಅರ್ಜಿಯನ್ನು ಜ.24ರಂದು ವಿಚಾರಣೆಗೆ ಸುಪ್ರೀಂಕೋರ್ಟ್‌ ಪರಿಗಣಿಸಿದೆ. ಹೀಗಾಗಿ, ಸ್ವಲ್ಪ ದಿನ ಕಾದು ನೋಡಿ ಎಂದು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next