Advertisement

ಮರಾಟಿ ಸಮಾಜ ಸೇವಾ ಸಂಘ ಭೇಟಿ : ಸಂತ್ರಸ್ತರಿಗೆ ಸಾಂತ್ವನ

10:45 PM Aug 19, 2019 | sudhir |

ಮಡಿಕೇರಿ: ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘ ಹಾಗೂ ಕೊಡಗು ಜಿಲ್ಲಾ ಅಂಬಾಭವಾನಿ, ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಪದಾಧಿಕಾರಿಗಳು ಕಾವೇರಿ ಪ್ರವಾ ಹದ ಸಂದರ್ಭದಲ್ಲಿ ಹಾನಿ ಗೀಡಾದ ಪ್ರದೇಶಕ್ಕೆ ‌ ಭೇಟಿ ನೀಡಿ, ಕುಟುಂಬಸ್ತರಿಗೆ ಸಾಂತ್ವನ ಹೇಳಿದರು.

Advertisement

ಜಿಲ್ಲೆಯಲ್ಲಿ ಆಗಷ್ಟ್ ತಿಂಗಳಲ್ಲಿ ಉಂಟಾದ ಕಾವೇರಿ ಪ್ರವಾಹದಿಂದ ಸಾಕಷ್ಟು ಮನೆಗಳು, ಆಸ್ತಿ-ಪಾಸ್ತಿಗಳು ಹಾನಿಯಾಗಿತ್ತು. ಈ ಸಂದರ್ಭದಲ್ಲಿ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪ ಕಟ್ಟೆಮಾಡು ಪರಂಬು ಪೈಸಾರಿಯಲ್ಲಿ ಜನಾಂಗ ಬಾಂಧವರಾದ ಉದಯ, ವೆಂಕಟೇಶ್‌, ಮುರಳಿಧರ್‌, ಮೋಹನ್‌, ಶಿವಪ್ಪರವರ ಮನೆಗಳು ಸಂಪೂರ್ಣ ಹಾನಿಯಾಗಿತ್ತು. ಅಲ್ಲದೆ ವಾಲ್ನೂರು ಹಾಗೂ ಸಿದ್ದಾಪುರದ ಕಡಿಗೋಡು, ನೆಲ್ಲಿಹುದಿಕೇರಿಗೆ ಭೇಟಿ ನೀಡಿದ ಪದಾಧಿಕಾರಿಗಳು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಎಂ.ಪರಮೇಶ್ವರ್‌, ಜಿಲ್ಲೆಯಲ್ಲಿ ಪ್ರವಾಹ ಹಾಗೂ ಪ್ರಕೃತಿ ವಿಕೋಪದಿಂದ ಸಾಕಷ್ಟು ಹಾನಿಯಾಗಿತ್ತು. ಇದರಲ್ಲಿ ನಮ್ಮ ಸಮುದಾಯ ಬಾಂಧವರು ಮನೆ ಕಳೆದುಕೊಂಡಿದ್ದರು. ಸರ್ಕಾರದ ಪರಿಹಾರದ ಜತೆಗೆ ಸಂಘದ ವತಿಯಿಂದ ಸಹಕಾರ ನೀಡಲಾಗುವುದು ಂದು ತಿಳಿಸಿದರು.

ಈ ಸಂದರ್ಭ ಅಂಭಾಭವಾನಿ ಯುವಕ ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಖಜಾಂಚಿ ಸಂಪತ್‌ಕುಮಾರ್‌, ಕಟ್ಟಡ ಸಮಿತಿ ಕಾರ್ಯದರ್ಶಿ ಎಂ.ಎಸ್‌.ಯೋಗೇಂದ್ರ, ಪ್ರಮುಖರಾದ ಎಂ.ಟಿ.ದೇವಪ್ಪ, ಎಂ.ಟಿ.ಗುರುವಪ್ಪ, ರಾಮಣ್ಣ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next