Advertisement

ಮರವೂರು ಸೇತುವೆ ಬಿರುಕು: ಬಜಪೆ ವಿಮಾನ ನಿಲ್ದಾಣಕ್ಕೆ ಹೋಗುವವರಿಗೆ ಇಲ್ಲಿದೆ ರಸ್ತೆ ಮಾಹಿತಿ

09:05 AM Jun 15, 2021 | Team Udayavani |

ಮಂಗಳೂರು: ನಗರದಿಂದ ಬಜಪೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಮರವೂರು ಸೇತುವೆಯಲ್ಲಿ ದೊಡ್ಡ ಪ್ರಮಾಣದ ಬಿರುಕು ಕಂಡುಬಂದಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಸೇತುವೆಯ ಎರಡೂ ಕಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ವಾಹನ ಸಂಚಾರಕ್ಕೆ ಅವಕಾಶ ನೀಡುತ್ತಿಲ್ಲ.

Advertisement

ಈ ಸೇತುವೆಯು ವಿಮಾನ ನಿಲ್ದಾಣ, ಕಟೀಲು ದೇವಸ್ಥಾನ, ನೆಲ್ಲಿ ತೀರ್ಥ, ಅದ್ಯಪಾಡಿಗೆ ಸಂಪರ್ಕ ಸಾಧಿಸುವ ಪ್ರಮುಖ ಕೊಂಡಿಯಾಗಿದೆ. ಸದ್ಯ ಸೇತುವೆ ಬಿರುಕಿನಿಂದ ಈ ಸಂಪರ್ಕ ಕೊಂಡಿ ತಪ್ಪಿದಂತಾಗಿದ್ದು, ಹಲವರಿಗೆ ಇದರ ಪರಿಣಾಮ ಬೀರಲಿದೆ.

ಇದನ್ನೂ ಓದಿ:ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ

ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕ ಪ್ರತಿದಿನ ನೂರಾರು ವಾಹನಗಳು ಈ ದಾರಿಯಲ್ಲಿ ಸಾಗುತ್ತದೆ. ಸದ್ಯ ಸೇತುವೆಯಲ್ಲಿ ಬಿರುಕು ಬಿದ್ದ ಕಾರಣ ಮಂಗಳೂರಿನ ಕಾವೂರಿನಿಂದ ಏರ್ ಪೋರ್ಟ್ ಗೆ ತೆರಳುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಬಜಪೆ ವಿಮಾನ ನಿಲ್ದಾಣಕ್ಕೆ ಮಂಗಳೂರು ನಗರದಿಂದ ಬರುವವರು ನಂತೂರಿನಲ್ಲಿ ತಿರುವು ಪಡೆದು ಕುಲಶೇಖರ -ಗುರುಪುರ ರಸ್ತೆಯಾಗಿ ಎರ್ ಪೂರ್ಟ್ ಗೆ ತೆರಳಲು ಸೂಚನೆ ನೀಡಲಾಗಿದೆ. ಉಡುಪಿ ಕಡೆಯಿಂದ ಬರುವವರು ಮೂಲ್ಕಿಯಲ್ಲಿ ತಿರುವು ಪಡೆದು ಕಿನ್ನಿಗೋಳಿ-ಕಟೀಲು ರಸ್ತೆಯಾಗಿ ಏರ್ ಪೋರ್ಟ್ ತೆರಳಲು ಸೂಚನೆ ನೀಡಲಾಗಿದೆ.

Advertisement

ಇದನ್ನೂ ಓದಿ:ಜೂ.15ರಿಂದ CETಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ : ಜು.10 ಕೊನೆಯ ದಿನ

ಕರಾವಳಿ ಭಾಗದಲ್ಲಿ ಕಳೆದ ಮೂರು ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದೆ. ನದಿಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಇಲ್ಲಿ ಹೊಸ ಸೇತುವೆ ಕಾಮಗಾರಿ ಹಿನ್ನೆಲೆ ನೀರಿನ ಹರಿವು ಒಂದೇ ಭಾಗದಲ್ಲಿ ಹೆಚ್ಚಾಗಿತ್ತು, ಹೀಗಾಗಿ ಸೇತುವೆಯ ಮೊದಲ ಅಂಕಣದ ( ಮೊದಲ ಪಿಲ್ಲರ್ ಬಳಿ) ಹಾನಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next