Advertisement

ಮಾ. 9: ರಾಜನಾಥ್‌ ಮಂಗಳೂರಿಗೆ​​​​​​​

12:30 AM Mar 07, 2019 | Team Udayavani |

ಮಂಗಳೂರು: ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಮಾ. 9 ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ನಗರದ ಕೇಂದ್ರ ಮೈದಾನದಲ್ಲಿ  ಏರ್ಪಡಿಸಿರುವ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡ ಬಿಜೆಪಿ ಕ್ಲಸ್ಟರ್‌ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ  ಭಾಗವಹಿಸಲಿದ್ದಾರೆ.

Advertisement

ಕ್ಲಸ್ಟರ್‌ ಮಟ್ಟದ ಸಮಾವೇಶವು ಬೆಳಗ್ಗೆ  11 ಗಂಟೆಯಿಂದ ಮಧ್ಯಾಹ್ನ  1.30ರ ವರೆಗೆ ನಡೆಯಲಿದ್ದು, ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಮತ್ತು  ಶಿವಮೊಗ್ಗ ಲೋಕ ಸಭಾ ಕ್ಷೇತ್ರಗಳ ವ್ಯಾಪ್ತಿಯ ಶಕ್ತಿ ಕೇಂದ್ರಕ್ಕೆ ಸಂಬಂಧಿಸಿದ ಪ್ರಮುಖರು, ಸಹ ಪ್ರಮುಖರು, ಬೂತ್‌ ಮಟ್ಟದ ಅಧ್ಯಕ್ಷರು ಮತ್ತು  ಕಾರ್ಯದರ್ಶಿ ಗಳು, ಪ್ರಭಾರಿಗಳು, ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾ ಗಳ ಪದಾಧಿಕಾರಿಗಳು, ರಾಜ್ಯದ ಚುನಾಯಿತ ಜನಪ್ರತಿನಿಧಿಗಳು, ಕಾರ್ಯಕಾರಿಣಿ ಸದಸ್ಯರು, ರಾಜ್ಯ ಬಿಜೆಪಿ ನಾಯಕರು ಸಹಿತ ಸುಮಾರು 10,000 ಮಂದಿ ಭಾಗವಹಿಸಲಿದ್ದಾರೆ ಎಂದು ಕ್ಲಸ್ಟರ್‌ ಸಂಚಾಲಕ ಹಾಗೂ ಮಾಜಿ ವಿಧಾನಪರಿಷತ್‌ ಸದಸ್ಯ ಕೆ. ಮೋನಪ್ಪ ಭಂಡಾರಿ ಅವರು ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ದ.ಕ. ಜಿಲ್ಲೆಯಿಂದ ಬೂತ್‌ ಲೆವೆಲ್‌ ಏಜೆಂಟ್‌ (ಬಿಎಲ್‌ಎ 1 ಮತ್ತು 2), ವಿಧಾನಸಭಾ ಕ್ಷೇತ್ರ ಪ್ರಮುಖರಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಹಲವು ಕಡೆ ಕ್ಲಸ್ಟರ್‌ ಮಟ್ಟದ ಕಾರ್ಯಕ್ರಮಗಳು ಜರಗಿವೆ. ಮುಂಬರುವ ಲೋಕಸಭಾ ಚುನಾವಣೆ ಯನ್ನು ಗಮನ ದಲ್ಲಿಟ್ಟುಕೊಂಡು ಇದನ್ನು ನಡೆಸಲಾಗುತ್ತಿದೆ. ಈ ಮೂಲಕ ಮಹಾಶಕ್ತಿ ಕೇಂದ್ರದ ಪ್ರಮುಖರಿಗೆ ಚುನಾವಣಾ ಮಾಹಿತಿ ನೀಡಲಾಗುತ್ತಿದೆ ಎಂದರು.

ಪ್ರಬುದ್ಧರ ಜತೆ ಸಂವಾದ
ಅದೇ ದಿನ (ಮಾ. 9) ಕ್ಲಸ್ಟರ್‌ ಮಟ್ಟದ ಸಮಾವೇಶದ ಬಳಿಕ ಮಧ್ಯಾಹ್ನ 3.30ಕ್ಕೆ ನಗರದ ಡಾ| ಟಿ.ಎಂ.ಎ. ಪೈ ಸಭಾಂಗಣದಲ್ಲಿ ಇಂಟೆಲೆಕುcವಲ್‌ ಮೀಟ್‌ (ಪ್ರಬುದ್ಧರ ಜತೆ ಸಂವಾದ) ಏರ್ಪಡಿಸ ಲಾಗಿದ್ದು, ರಾಜನಾಥ್‌ ಸಿಂಗ್‌ ಅವರು ಪಾಲ್ಗೊಳ್ಳಲಿದ್ದಾರೆ. ಉದ್ಯಮಿಗಳು, ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಲಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next