Advertisement

March 21: ಚೆನ್ನೈಯಲ್ಲಿ 3ನೇ ಬಾರಿಗೆ ಎಚ್‌ಡಿಕೆಗೆ ಹೃದಯ ಶಸ್ತ್ರ ಚಿಕಿತ್ಸೆ

12:18 AM Mar 16, 2024 | Team Udayavani |

ಮಂಡ್ಯ: ಮಾರ್ಚ್‌ 21ರಂದು ನನಗೆ ಮೂರನೇ ಬಾರಿಗೆ ಹೃದಯ ಶಸ್ತ್ರ ಚಿಕಿತ್ಸೆ ನಡೆಯಲಿದೆ. ಅದಕ್ಕಾಗಿ ನಾನು ಚೆನ್ನೈಗೆ ಹೋಗಲಿದ್ದೇನೆ. ಅಮೆರಿಕದಿಂದ ಬರುವ ಇಬ್ಬರು ವೈದ್ಯರ ತಂಡ ಚಿಕಿತ್ಸೆ ನೀಡಲಿದೆ. ಅಷ್ಟು ಸುಲಭವಾಗಿ ನಾನು ಭೂಮಿಗೆ ಹೋಗುವುದಿಲ್ಲ. ಯಾವುದೇ ಆತಂಕ ಬೇಡ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

Advertisement

ನಗರದ ಡಾ| ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ನಡೆದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿಮ್ಮೆಲ್ಲರ ಹಾರೈಕೆಯಿಂದ ಗುಣಮುಖನಾಗಿ ಬರುತ್ತೇನೆ. ಅನಂತರ 18 ವರ್ಷಗಳ ಕಾಲ ಯಾವುದೇ ಚಿಕಿತ್ಸೆ ಇಲ್ಲದೆ ಇರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದು, ಮಾ.25ರ ಬಳಿಕ ಜಿಲ್ಲೆಯ ಎಲ್ಲ ಮುಖಂಡರು ಹಾಗೂ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next