Advertisement

ಮಾ. 7ಕ್ಕೆ ಏಕಲವ್ಯ, ಕ್ರೀಡಾ ರತ್ನ ಪ್ರದಾನ

06:30 AM Mar 04, 2018 | Team Udayavani |

ಬೆಂಗಳೂರು:  ಪ್ರತಿ ವರ್ಷ ರಾಜ್ಯದ ಸಾಧಕ ಕ್ರೀಡಾಪಟುಗಳಿಗೆ ಕೊಡಮಾಡುವ ಏಕಲವ್ಯ, ಕರ್ನಾಟಕ ಕ್ರೀಡಾರತ್ನ, ಜೀವನಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು ಮಾ.7ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ.

Advertisement

ಉದಯವಾಣಿಗೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.  ಈ ಸಲ ಆಯ್ಕೆ ಸಮಿತಿ ಮುಂದೆ ಹಲವಾರು ಅರ್ಜಿಗಳು ಬಂದಿದ್ದು ಇದನ್ನೆಲ್ಲ ತಾಳ್ಮೆಯಿಂದ ಪರಿಶೀಲಿಸಿದ ಸಮಿತಿ ಅಂತಿಮವಾಗಿ ಅರ್ಹ ಅಭ್ಯರ್ಥಿಗಳಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಿದೆ ಎನ್ನಲಾಗಿದೆ.

ಮೂರು ದಿನಗಳ ಒಳಗೆ ಪಟ್ಟಿ ಪ್ರಕಟ: ಪ್ರಶಸ್ತಿಗೆ ಆಯ್ಕೆಯಾದ ಕ್ರೀಡಾಪಟುಗಳ ಪಟ್ಟಿಯನ್ನು ಸಿದ್ಧವಾಗಿದೆ. ಇನ್ನು 3 ದಿನದ ಒಳಗೆ ಸಂಪೂರ್ಣ ಪಟ್ಟಿಯನ್ನು ಪ್ರಕಟಿಸಲಿದ್ದೇವೆ. ಪ್ರಶಸ್ತಿ ವಿಜೇತರ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ ಅನ್ನುವುದನ್ನು ಆಗ ತಿಳಿಯಬಹುದಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಎಲ್ಲಿ ನಡೆಯಲಿದೆ ಎನ್ನುವುದು ಇನ್ನಷ್ಟೇ ನಿರ್ಧಾರವಾಗಬೇಕಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

“ಪೋಷಕ ರತ್ನ’ ಹೊಸ ಪ್ರಶಸ್ತಿ: ಪ್ರತಿ ಸಲ ಕರ್ನಾಟಕ ಕ್ರೀಡಾ ರತ್ನ, ಏಕಲವ್ಯ, ಜೀವನಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗುತ್ತಿತ್ತು. ಈ ಬಾರಿ ಈ ಪ್ರಶಸ್ತಿಗಳ ಜತೆಗೆ “ಪೋಷಕ ರತ್ನ’ ಹೊಸದೊಂದು ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಕ್ರೀಡೆಗೆ ಪ್ರೋತ್ಸಾಹ ನೀಡುವ ಸಂಘ -ಸಂಸ್ಥೆ, ವ್ಯಕ್ತಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. 5 ಲಕ್ಷ ರೂ. ನಗದು ಪುರಸ್ಕಾರವನ್ನು ಪ್ರಶಸ್ತಿ ಒಳಗೊಂಡಿದೆ. ಏಕಲವ್ಯ (2 ಲಕ್ಷ ರೂ.), ಕರ್ನಾಟಕ ಕ್ರೀಡಾ ರತ್ನ (1 ಲಕ್ಷ ರೂ.) ಹಾಗೂ ಜೀವನಶ್ರೇಷ್ಠ ಸಾಧನೆ ಪ್ರಶಸ್ತಿ (1 ಲಕ್ಷ ರೂ.) ಒಳಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next