Advertisement

‘ಮರ್ದಿನಿ’ಯ ಆ್ಯಕ್ಷನ್‌ ಝಲಕ್‌

12:40 PM Feb 21, 2022 | Team Udayavani |

“ಮರ್ದಿನಿ’ ಹೀಗೊಂದು ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಿಚ್ಚ ಸುದೀಪ್‌ ಕೂಡಾ ಟ್ರೇಲರ್‌ಗೆ ಮೆಚ್ಚುಗೆ ಸೂಚಿಸಿ, ಇಡೀ ತಂಡಕ್ಕೆ ಶುಭಕೋರಿದ್ದಾರೆ. ಕನ್ನಡ ಚಿತ್ರರಂಗದೊಂದಿಗೆ ಹದಿನೆಂಟು ವರ್ಷಗಳ ನಂಟು ಹೊಂದಿರುವ ಜಗ್ಗಿ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಜಗ್ಗಿ ಅವರ ಮಡದಿ ಭಾರತಿ ಜಗ್ಗಿ ಕೂಡಾ ನಿರ್ಮಾಣದಲ್ಲಿ ಸಾಥ್‌ ನೀಡಿದ್ದಾರೆ.

Advertisement

“ನಾನು ಚಿತ್ರ ನಿರ್ಮಾಣ ಮಾಡಲು ಮೂರು ಜನ ಮುಖ್ಯ ಕಾರಣ ಕಿಚ್ಚ ಸುದೀಪ್‌, ನನ್ನ ಸ್ನೇಹಿತರಾದ ಯೋಗೀಶ್‌ ಹಾಗೂ ಸಾಜಿದ್‌ ಖುರೇಶಿ ಅವರು. ಹದಿನೆಂಟು ವರ್ಷಗಳ ಹಿಂದೆ ಪೈಂಟರ್‌ ಆಗಿ ಬಂದ ನಾನು, ಈಗ ನಿರ್ಮಾಪಕನಾಗಿದ್ದೇನೆ. ಚಿತ್ರ ನಿರ್ಮಾಣ ಅಂದುಕೊಂಡಷ್ಟು ಸುಲಭವಲ್ಲ. ಸಾಕಷ್ಟು ಶ್ರಮಪಟ್ಟು ಚಿತ್ರ ನಿರ್ಮಾಣ ಮಾಡಿದ್ದೀನಿ. ಆದಷ್ಟು ಹೊಸಬರಿಗೆ ಅವಕಾಶ ನೀಡಿದ್ದೀವಿ. ಸದ್ಯದಲ್ಲೇ ತೆರೆಗೆ ತರುತ್ತೇವೆ’ ಎನ್ನುವುದು ಜಗ್ಗಿ ಅವರ ಮಾತು. ಈ ಹಿಂದೆ ಪ್ರಥಮ್‌ ಅಭಿನಯದ “ದೇವ್ರಂಥ ಮನುಷ್ಯ’ ಚಿತ್ರ ನಿರ್ದೇಶನ ಮಾಡಿದ್ದ, ಕಿರಣ್‌ ಕುಮಾರ್‌ “ಮರ್ದಿನಿ’ ಚಿತ್ರದ ನಿರ್ದೇಶಕರು. “ಇದೊಂದು ಸಸ್ಪೆನ್ಸ್ ಥ್ರಿಲ್ಲರ್‌ ಚಿತ್ರ. ಎಲ್ಲರ ಸಹಕಾರದಿಂದ ಉತ್ತಮವಾಗಿ ಮೂಡಿಬಂದಿದೆ’ ಎಂದರು.

ಇದನ್ನೂ ಓದಿ:ಅಖಾಡಕ್ಕಿಳಿದ ಹಂಟರ್‌; ರಗಡ್‌ ಲುಕ್‌ ನಲ್ಲಿ ನಿರಂಜನ್‌

“ನಾನು ಈ ಸಿನಿಮಾದಲ್ಲಿ ಅಭಿನಯಿಸುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಜಿಮ್‌ ನಲ್ಲಿ ನಿರ್ಮಾಪಕ ಜಗ್ಗಿ ಅವರನ್ನು ಭೇಟಿಯಾದೆ. ಕೆಲವು ದಿನಗಳ ನಂತರ ಜಗ್ಗಿ ಅವರು, ನಾನು ಒಂದು ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ನೀವೇ ಅದರ ನಾಯಕ ಎಂದರು. ಇದೇನಪ್ಪ ನಾಯಕಿಗೆ ಇವರು ನಾಯಕ ಅನ್ನುತ್ತಿದ್ದಾರೆ ಅಂದುಕೊಂಡೆ. ಆಗ ಅವರು ಹೇಳಿದರು. ನಿಮ್ಮದೇ ಈ ಚಿತ್ರದಲ್ಲಿ ಮುಖ್ಯ ಪಾತ್ರ. ನೀವು ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿ ಕೊಳ್ಳುತ್ತಿದ್ದೀರಿ ಅಂದಾಗ ಸಂತೋಷ ವಾಯಿತು’ ಎಂದು ಮುಖ್ಯ ಪಾತ್ರಧಾರಿ ರಿತನ್ಯ ಪೂವಯ್ಯ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

ಹಿತನ್‌ ಹಾಸನ್‌ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅಕ್ಷಯ್‌ ಈ ಚಿತ್ರಕ್ಕೆ ಕಥೆ ಕೂಡ ಬರೆದಿದ್ದಾರೆ. ಅರುಣ್‌ ಸುರೇಶ್‌ ಈ ಚಿತ್ರದ ಛಾಯಾಗ್ರಹಕರು

Advertisement
Advertisement

Udayavani is now on Telegram. Click here to join our channel and stay updated with the latest news.

Next