Advertisement

ಗಾಂಜಾ ಸೇವನೆ- ಯುವಕನ ಬಂಧನ

12:59 AM Nov 03, 2023 | Team Udayavani |

ಮಂಗಳೂರು: ಉರ್ವ ಮೈದಾನದ ಬಳಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ವಶಕ್ಕೆ ಪಡೆದ ಪೊಲೀಸರು ಆತನನ್ನು ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

Advertisement

ಉರ್ವಸ್ಟೋರ್‌ ಚರ್ಚ್‌ಗುಡ್ಡೆಯ ರೋಶನ್‌ (28) ಬಂಧಿತ ಆರೋಪಿ. ಸೈಬರ್‌ ಆರ್ಥಿಕ ಮತ್ತು ಮಾದಕದ್ರವ್ಯ ಅಪರಾಧ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕಿ ಶೋಭಾ ಅವರು ಸಿಬಂದಿಯೊಂದಿಗೆ ಗುರುವಾರ ಬೆಳಗ್ಗೆ 10.40ರ ವೇಳೆಗೆ ರೌಂಡ್ಸ್‌ ಕರ್ತವ್ಯದಲ್ಲಿದ್ದಾಗ ಸಿಕ್ಕ ಖಚಿತ ಮಾಹಿತಿಯಂತೆ ಆತನನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಎನ್‌.ಡಿ.ಪಿ.ಎಸ್‌. ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next