Advertisement
ಸಂರಕ್ಷಿತ ಸ್ಮಾರಕ ಪ್ರದೇಶದ ವ್ಯಾಪ್ತಿಯಲ್ಲಿ ಹೊಸ ಮಾರುಕಟ್ಟೆ ಕಟ್ಟಡ ನಿರ್ಮಾಣ ಮಾಡುತ್ತಿರುವ ಮೂಡುಬಿದಿರೆ ಪುರಸಭೆಯ ಕ್ರಮ ಪ್ರಶ್ನಿಸಿ ಜೇಸನ್ ಮಾರ್ಷಲ್ ನವಾರೇಸ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಮಾರುಕಟ್ಟೆ ಕಟ್ಟಡ ನಿರ್ಮಾಣ ಅನುಮತಿಯನ್ನು ತಿರಸ್ಕರಿಸಿದ ರಾಷ್ಟ್ರೀಯ ಸ್ಮಾರಕಗಳ ಪ್ರಾಧಿಕಾರ (ಎನ್ಎಂಎ) ಕ್ರಮ ಪ್ರಶ್ನಿಸಿ ಮೂಡುಬಿದಿರೆ ಪುರಸಭೆ ಸಲ್ಲಿಸಿರುವ ಅರ್ಜಿಗಳು ಮುಖ್ಯ ನ್ಯಾ| ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿದ್ದವು.
ಸಂರಕ್ಷಿತ ಸ್ಮಾರಕ ಪ್ರದೇಶದ 100 ಮೀಟರ್ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ನಿರ್ಬಂಧವಿದೆ. ಆದರೆ ಮಾರುಕಟ್ಟೆ ಸ್ಥಳವು ಸಂರಕ್ಷಿತ ಸ್ಮಾರಕ ಪ್ರದೇಶದ ವ್ಯಾಪ್ತಿಗೆ ಬರುವುದಿಲ್ಲ. ಮೇಲಾಗಿ ಕಟ್ಟಡ ನಿರ್ಮಾಣದಿಂದ ಸಂರಕ್ಷಿತ ಸ್ಮಾರಕಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ ಕೇಂದ್ರ ಸರಕಾರ ಸ್ವಾಮ್ಯದ ಇಂಡಿಯನ್ ನ್ಯಾಶನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್’ ವರದಿ ನೀಡಿದೆ. ಈ ವರದಿ ಪರಿಶೀಲಿಸಿ ಎಂದು ನ್ಯಾಯಾಲಯದ ಆದೇಶವವಿದ್ದರೂ ಭಾರತೀಯ ಪುರಾ ತತ್ವ ಸರ್ವೇಕ್ಷಣಾಲಯ ಅದನ್ನು ಪರಿಗಣಿಸಿಲ್ಲ ಎಂದು ಮೂಡಬಿದಿರೆ ಪುರಸಭೆ ಪರ ವಕೀಲರು ವಾದಿಸಿದರು.
Related Articles
Advertisement