ಪುತ್ತೂರು: ನಗರದ ದರ್ಬೆ ನಿವಾಸಿ ಬೆಂಗಳೂರಿನಲ್ಲಿ ವಾಸ್ತವ್ಯ ಹೊಂದಿರುವ ಹಿಂದೂ ಯುವತಿಯೊಂದಿಗೆ ಬೆಂಗಳೂರಿನ ಮುಸ್ಲಿಂ ಧರ್ಮದ ವ್ಯಕ್ತಿಯೋರ್ವ ವಿವಾಹವಾಗುವ ನಿಟ್ಟಿನಲ್ಲಿ ವಿವಾಹ ನೋಂದಣಿ ಕಚೇರಿಯಲ್ಲಿ ಅಳವಡಿಸಿರುವ ಆಕ್ಷೇಪಣಾ ಸಲ್ಲಿಸಲು ಮಾಹಿತಿ ಇರುವ ನೋಟೀಸ್ವೊಂದು ಸಾಮಾಜಿಕ ಜಾಲಾಣದಲ್ಲಿ ಹರಿದಾಡುತ್ತಿದ್ದು ಹಿಂದೂ ಪರ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿರುವ ಘಟನೆ ನಡೆದಿದೆ.
ಪುತ್ತೂರಿನ ಅಕ್ಷತಾ ಕೆ. ಅವರು ಬೆಂಗಳೂರಿನ ನ್ಯಾಪನಹಳ್ಳಿ ನಿವಾಸಿ ಶೇಖ್ ಮಹಮ್ಮದ್ ಸಲೀಮ್ ಅವರನ್ನು ವಿವಾಹ ಆಗುವುದಾಗಿ ಬೆಂಗಳೂರಿನ ವಿವಾಹ ನೋಂದಾಣಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿವಾಹ ನೋಂದಾಣೆ ಕಚೇರಿಯಲ್ಲಿ ವಿವಾಹಕ್ಕೆ ಅವಕಾಶ ನೀಡುವ ಮೊದಲು ಯಾರಿಂದಲಾದರೂ ಆಕ್ಷೇಪಣೆ ಇದೆಯೇ ಎಂಬ ಕುರಿತು 30 ದಿನದ ನೋಟೀಸ್ ಅನ್ನು ಕಚೇರಿಯಲ್ಲಿ ಅಳವಡಿಸಿದ್ದರು. ಆ ನೋಟೀಸ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಿಂದೂ ಸಂಘಟನೆಗಳು ಇದೊಂದು ಲವ್ ಜಿಹಾದ್ ಎಂದು ಆರೋಪಿಸಿದೆ.