Advertisement
ಖಾಸಗಿ ದೂರವಾಣಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಹಾರೂನ್ ಮೂರು ವರ್ಷಗಳ ಹಿಂದೆ ಪರಿಚಯವಾಗಿದ್ದ ತನಗಿಂತ ಸುಮಾರು 12 ವರ್ಷ ಹೆಚ್ಚು ಪ್ರಾಯದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ತಾನು ಅರುಣ್ ಪೂಜಾರಿ ಎಂದು ಕುಂಪಲದಲ್ಲಿ ಹೇಳಿಕೊಂಡಿದ್ದ ಈತನ ನಿಜ ಬಣ್ಣ ಏಳು ತಿಂಗಳ ಹಿಂದೆ ಬಯಲಾಗಿತ್ತು. ಯುವತಿಯ ಸಹೋದರಿ ಬ್ಯಾಗ್ ಚೆಕ್ ಮಾಡಿದಾಗ ಈತನ ನಿಜ ಹೆಸರು ಪತ್ತೆಯಾಗಿತ್ತು. ಆವರೆಗೆ ತಾನು ಅನಾಥ ಎಂದು ತಿಳಿಸಿದ್ದ. ಈ ಸಂದರ್ಭದಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಘಟನೆ ಬಳಿಕ ಯುವತಿಯೊಂದಿಗೆ ಸಂಪರ್ಕ ಇರಲಿಲ್ಲ ಎನ್ನಲಾಗಿದ್ದು, ಬುಧವಾರ ಏಕಾಏಕಿ ಹಾರೂನ್ ಯುವತಿ ಮನೆಗೆ ತೆರಳಿ 60 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದು, ಈ ಸಂದರ್ಭದಲ್ಲಿ ಯುವತಿಯ ಸಹೋದರಿ ಹಾರೂನ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಗ ಸ್ಥಳೀಯರೂ ಹಾರೂನ್ಗೆ ಧರ್ಮದೇಟು ನೀಡಿ ಬಳಿಕ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.