Advertisement

ಹೆಚ್ಚಿನ ವರದಕ್ಷಿಣೆಗಾಗಿ ಮಹಿಳೆಯನ್ನು ಹೊಡೆದು ಕೊಂದ ಗಂಡ, ಮಾವ

03:58 PM Mar 06, 2017 | udayavani editorial |

ಮುಜಫ‌ರನಗರ : ಕಳೆದ ವರ್ಷವಷ್ಟೇ ಮದುವೆಯಾಗಿದ್ದ ಮಹಿಳೆಯನ್ನು ಹೆಚ್ಚಿನ ವರದಕ್ಷಿಣೆಗಾಗಿ ಆಕೆಯ ಗಂಡ, ಅತ್ತೆ, ಮಾವ ಹಾಗೂ ಮನೆಯವರು ಸೇರಿ ಮಾರಣಾಂತಿಕ ಹಲ್ಲೆ ನಡೆಸಿ ಹೊಡೆದು ಕೊಂದಿರವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

ಮೃತ ಮಹಿಳೆಯ ಮಾವ ರಾಜ್‌ಕುಮಾರ್‌ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆಕೆಯ ಪತಿ ಸುಧೀರ್‌ ಕುಮಾರ್‌ ನಾಪತ್ತೆಯಾಗಿದ್ದಾನೆ.

ಮೃತ ಮಹಿಳೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ತನ್ನ ಸಹೋದರಿ ಕೋಮಲ್‌ ಳನ್ನು ಆಕೆಯ ಗಂಡ ಹಾಗೂ ಮನೆಯವರು, ಹೆಚ್ಚಿನ ವರದಕ್ಷಿಣೆಗಾಗಿ, ನಿರ್ದಯವಾಗಿ ಹೊಡೆದು ಕೊಂದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. 

ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next