Advertisement

ವಿವಾಹಿತ ಯುವತಿ ಸಾವು : ಯುವತಿಯ ಪೋಷಕರಿಂದ ಪ್ರಿಯಕರನ ಮನೆಗೆ ಬೆಂಕಿ

07:58 PM Jul 09, 2021 | Team Udayavani |

ಬಾಗಲಕೋಟೆ: ವಿವಾಹಿತ ಯುವತಿಯ ಸಾವಿಗೆ ಆಕೆಯ ಪ್ರಿಯಕರನೇ ಕಾರಣ ಎಂದು ಆರೋಪಿಸಿದ ಯುವತಿಯ ಪೋಷಕರು ಪ್ರಿಯಕರನ ಮನೆಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಇಳಕಲ್ ತಾಲೂಕಿನ ಕೆಲೂರ ಗ್ರಾಮದಲ್ಲಿ ನಡೆದಿದೆ.

Advertisement

ಕೆಲೂರ ಗ್ರಾಮದ ವಿವಾಹಿತ ಯುವತಿ ಬಸಮ್ಮ ಪ್ರಿಯಕರನ ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಇದನ್ನು ಕಂಡು ಆಕ್ರೋಷಗೊಂಡ ಯುವತಿಯ ಪೋಷಕರು ಯುವತಿಯ ಸಾವಿಗೆ ಪ್ರೀಯಕರ ರಂಜೀತ್ ಕಾರಣ ಎಂದು ಪ್ರಿಯಕರನ ಮನೆಗೆ ಬೆಂಕಿಹಚ್ಚಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.

ರಂಜೀತ್ ಹಾಗೂ ಬಸಮ್ಮ ಬೇರೆ ಜಾತಿಯವರಾಗಿದ್ದು ಪರಸ್ಪರ ಪ್ರೀತಿಸುತ್ತಿದ್ದರು ಈ ವಿಷಯ ತಿಳಿದ ಕುಟುಂಬಸ್ಥರು ಬಸಮ್ಮಳಿಗೆ ಗದಗ ಮೂಲದ ಯುವಕನೊಂದಿಗೆ ವಿವಾಹ ಮಾಡಲಾಗಿತ್ತು ಆದರೆ ಯುವತಿ ಗಂಡನನ್ನು ತೊರೆದು ಪ್ರೀಯಕರ ರಂಜಿತ್ ಜೊತಗೆ ವಾಸಿಸುತ್ತಿದ್ದಳು.

ಇದನ್ನೂ ಓದಿ : ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ 1ಲಕ್ಷ ರೂ. ಬೋನಸ್‌! ಕೋವಿಡ್ ಸಮಯದಲ್ಲಿ ನೌಕರ ಸ್ನೇಹಿ ಹೆಜ್ಜೆ

ಆದರೆ ಇದೀಗ ಪ್ರಿಯಕ್ ರಂಜಿತ ಮನೆಯಲ್ಲಿಯೇ ಯುವತಿ ಬಸಮ್ಮಳ ಶವ ನೇಣುಬಿಗದ ಸ್ಥಿತಿಯಲ್ಲಿ ಪತ್ತೆಯಾಗಿದ್ದು,ಬಸಮ್ಮಳ ಕುಟುಂಬಸ್ಥರು ಕೊಲೆ ಎಂದು ಆರೋಪಿಸಿದ್ದಾರೆ.ವಿವಾಹಿತ ಯುವತಿ ಶವವಾಗಿ ಪತ್ತೆಯಾದ ಬೆನ್ನೆಲೆ ಪ್ರಿಯಕರ ರಂಜಿತ್ ಕುಟುಂಬಸ್ಥರು ನಾಪತ್ತೆಯಾಗಿದ್ದು ಆಕ್ರೋಶಗೊಂಡ ಬಸಮ್ಮನ ಕುಟುಂಬಸ್ಥರು ರಂಜಿತ್ ಮನೆಗೆ ಬೆಂಕಿ ಹಚ್ಚಿದ್ದಾರೆ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಬೇಟಿ ನೀಡಿ ಬೆಂಕಿ ನಂದಿಸಿದರು.ಅಮೀನಗಡ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next