Advertisement

ಬುಡಾ ನೂತನ ಅಧ್ಯಕ್ಷರಾಗಿ ಮಾರುತಿ ಪ್ರಸಾದ್

06:21 PM Sep 05, 2022 | Team Udayavani |

ಬಳ್ಳಾರಿ: ಇಲ್ಲಿನ ಬಳ್ಲಾರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಿರೀಕ್ಷೆಯಂತೆ ಸರ್ವಶೆಟ್ಟಿ ಮಾರುತಿ ಪ್ರಸಾದ್ ಬಿನ್.ಎಸ್ ಆನಂದ ಶೆಟ್ಟಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

Advertisement

ಹಿಂದಿನ ಬುಡಾ ಅಧ್ಯಕ್ಷರಾಗಿದ್ದ ಪಿ.ಪಾಲಣ್ಣ ಅವರು ನಿಗದಿಯಂತೆ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಮಾರುತಿ ಪ್ರಸಾದ್ ಅವರು ಬರುತ್ತಾರೆ ಎಂಬ ಮಾತುಗಳು ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದು, ಅದರಂತೆ ಮಾರುತಿ ಪ್ರಸಾದ್ ಅವರನ್ನು ಬುಡಾ ಅಧ್ಯಕ್ಷರನ್ನಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿವರೆಗೆ ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ಅವರು ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next