Advertisement

ಮಸೂದ್‌ ಕೊಲೆ ಪ್ರಕರಣ- 8ನೇ ಆರೋಪಿಗೆ ಷರತ್ತು ಬದ್ಧ ಜಾಮೀನು

10:21 PM Aug 03, 2023 | Team Udayavani |

ಸುಳ್ಯ: ಸುಳ್ಯ ತಾಲೂಕಿನ ಕಳಂಜದಲ್ಲಿ ನಡೆದಿದ್ದ ಮಸೂದ್‌ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳ ಪೈಕಿ 8ನೇ ಆರೋಪಿಯಾಗಿದ್ದ ಭಾಸ್ಕರ್‌ ಕೆ.ಎಂ. ಎಂಬಾತನಿಗೆ ಹೈಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದೆ.

Advertisement

2022 ಜು. 19ರಂದು ಕಳಂಜದಲ್ಲಿ 8 ಮಂದಿ ಯುವಕರ ತಂಡ ಮಸೂದ್‌ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಮಸೂದ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿ ಆರೋಪಿಗಳನ್ನು ಬೆಳ್ಳಾರೆ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಪ್ರಕರಣದ 8 ಆರೋಪಿಯಾಗಿರುವ ಭಾಸ್ಕರ ಕೆ.ಎಂ. ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಗುರುವಾರ ಷರತ್ತುಬದ್ಧ ಜಾಮೀನು ಮಂಜೂರುಗೊಂಡಿದೆ. ಹಿರಿಯ ವಕೀಲರಾದ ಅರುಣ್‌ ಶ್ಯಾಮ್‌ ಪುತ್ತೂರು ವಾದ ಮಂಡಿಸಿದ್ದು, ವಕೀಲರಾದ ಸುಯೋಗ್‌ ಹೇರಳೆ ಹಾಗೂ ನಿಶಾಂತ್‌ ವಕಾಲತ್ತು ಹಾಕಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next