Advertisement

ಇಸ್ಕಾನ್‌ನಲ್ಲಿ ಸಾಮೂಹಿಕ ಕೀರ್ತನೆ ಮೂಲಕ ಪ್ರತಿಭಟನೆ

10:31 AM Oct 24, 2021 | Team Udayavani |

ಬೆಂಗಳೂರು: ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ನಡೆದ ಹಿಂದುಗಳ ಹತ್ಯೆ ಹಾಗೂ ಇಸ್ಕಾನ್‌, ದುರ್ಗಾ ಪೂಜಾ ಪೆಂಡಾಲುಗಳ ಮೇಲಿನ ದಾಳಿ ಖಂಡಿಸಿ ನಗರದ ಇಸ್ಕಾನ್‌ ದೇವಸ್ಥಾನದಲ್ಲಿ ಸಾಮೂಹಿಕ ಕೀರ್ತನೆ ಮೂಲಕ ಶಾಂತಿಯುತ ಪ್ರತಿಭಟನೆ ನಡೆಯಿತು. ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ ಒಳಗಾದ ಅಲ್ಪಸಂಖ್ಯಾತರ ಜತೆ ಐಕಮತ್ಯ ಸೂಚಿಸಲು ಹರೇ ಕೃಷ್ಣ ಬೆಟ್ಟದ ಮೇಲೆ ಕೀರ್ತನೆ ಮೆರವಣಿಗೆ ನಡೆಸಿ, ಅಲ್ಲಿನ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸಬೇಕು. ಬಾಂಗ್ಲಾದಲ್ಲಿರುವ ಹಿಂದು ದೇವಸ್ಥಾನಗಳನ್ನು ರಕ್ಷಿಸಬೇಕು ಎಂಬ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.

Advertisement

ನಂತರ ಮಾತನಾಡಿದ ಇಸ್ಕಾನ್‌ ಬೆಂಗಳೂರಿನ ಅಧ್ಯಕ್ಷ ಮಧು ಪಂಡಿತ ದಾಸ ಅವರು, ಬಾಂಗ್ಲಾದೇಶ ದಲ್ಲಿ ಇಸ್ಕಾನ್‌ ಭಕ್ತರ, ಹಿಂದೂಗಳ ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ನಡೆದ ಅಪ್ರಚೋದಿತ ದಾಳಿಯು ತುಂಬ ನೋವುಂಟುಮಾಡಿದೆ. ಬಾಂಗ್ಲಾ ದೇಶದ ಅಲ್ಪಸಂಖ್ಯಾತರಿಗೆ ನಾವೆಲ್ಲರೂ ಒಗ್ಗಟ್ಟಾಗಿ ಬೆಂಬಲ ಮತ್ತು ಐಕಮತ್ಯ ಸೂಚಿಸುತ್ತೇವೆ ಮತ್ತು ಅವರ ಸುರಕ್ಷತೆ, ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇವೆ ಎಂದರು.

ಬಾಂಗ್ಲಾ ಸರ್ಕಾರವು ಅಲ್ಲಿನ ನೊಂದ ಅಲ್ಪಸಂಖ್ಯಾತರ ರಕ್ಷಣೆಗಾಗಿ ಕೂಡಲೇ ವ್ಯವಸ್ಥೆ ಮಾಡಬೇಕು ಮತ್ತು ಇಂಥ ಘಟನೆಗಳು ಮುಂದೆ ನಡೆಯದಂತೆ ಎಚ್ಚರ ವಹಿಸಬೇಕು. ಭಾರತ ಸರ್ಕಾರ ಕೂಡ ನೆರೆ ರಾಷ್ಟ್ರಗಳ ಜತೆಗೂಡಿ ಬಾಂಗ್ಲಾದ ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಸಂರಕ್ಷಿಸಬೇಕು ಎಂದು ಒತ್ತಾಯಿಸಿದರು. ಕಳೆದ ಕೆಲವು ವಾರಗಳಲ್ಲಿ ಬಾಂಗ್ಲಾದೇಶದ ಹಿಂದೂ ಸಮುದಾಯದ ಮೇಲೆ ದಾಳಿಗಳು ನಡೆದಿವೆ. ಅವುಗಳಲ್ಲಿ ಇಸ್ಕಾನ್‌ ಮತ್ತು ಇತರ ಸಂಸ್ಥೆಗಳ ದೇವಸ್ಥಾನಗಳನ್ನು ಧ್ವಂಸ ಮಾಡಿ, ದೇವರ ವಿಗ್ರಹಗಳನ್ನು ಮುರಿದು ಹಾಕಲಾಗಿದೆ.

ಇದನ್ನೂ ಓದಿ:- ಹಿಂಗಾರು ಬಿತ್ತನೆಗೆ ಮರಳಿ ಬಂದ ಗ್ರಾಮಸ್ಥರು

ದುರ್ಗಾ ಪೂಜೆಯ ಪೆಂಡಾಲುಗಳನ್ನು ಸುಟ್ಟು ಹಾಕಿದ್ದಾರೆ. ನೋಖಾಲಿ ಇಸ್ಕಾನ್‌ನ ಪ್ರಾಂಥ ಚಂದ್ರ ದಾಸ ಮತ್ತು ಜತನ್‌ ಚಂದ್ರ ಸಾಹ ಎಂಬ ಇಬ್ಬರು ಭಕ್ತರು ಸಹಿತವಾಗಿ ಅನೇಕರನ್ನು ಅಲ್ಲಿನ ಮತಾಂಧರು ಸಾಯಿಸಿದ್ದಾರೆ. ಅನೇಕ ಹಿಂದೂಗಳ ಮನೆಗಳನ್ನು ಮತ್ತು ಅಂಗಡಿಗಳನ್ನು ವ್ಯವಸ್ಥಿತವಾಗಿ ಗುರಿಯಾಗಿಸಿ ಸುಟ್ಟು ಹಾಕಲಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮತ್ತು ಇತರ ಅಲ್ಪಸಂಖ್ಯಾತ ಗುಂಪುಗಳ ಮೇಲೆ ದಾಳಿಗಳು ದಶಕಗಳಿಂದ ನಡೆಯುತ್ತಿದೆ. ಇದು ನಿಲ್ಲಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವೂ ವಿಶೇಷ ಗಮನ ಹರಿಸಬೇಕು ಎಂದು ಆಗ್ರಹಿಸಿದರು. ಶಾಂತಿಯುತ, ಕಾನೂನು ಪರಿಪಾಲಿಸುವ ಸಮುದಾಯಗಳ ಮೇಲಿನ ಈ ದಾಳಿ ಮನುಕುಲದ ಸಾಮೂಹಿಕ ಪ್ರಜ್ಞೆ ಕಲುಕಿದೆ.

Advertisement

ಬಾಂಗ್ಲಾದ ಅಲ್ಪಸಂಖ್ಯಾತರ ರಕ್ಷಣೆಗೆ ಇಸ್ಕಾನ್‌ ವಿಶ್ವದಾದ್ಯಂತ ಶಾಂತಿಯುತ ಪ್ರತಿಭಟನೆ ನಡೆಸುತ್ತಿದೆ. ಬಾಂಗ್ಲಾದೇಶದ ಹಿಂದೂಗಳೊಂದಿಗೆ ಐಕಮತ್ಯ ಸೂಚಿಸಲು ಮತ್ತು ತನ್ನ ನೋವು, ದುಃಖವನ್ನು ಅಭಿವ್ಯಕ್ತಪಡಿಸಲು ಜಾಗತಿಕ ಹಿಂದೂ ಸಮಾಜವು ಜಾಗತಿಕ ಕೀರ್ತನೆ ಮೆರವಣಿಗೆ ನಡೆಸಿದೆ. ಈ ಪ್ರತಿ ಭಟನೆಯು ಯಾವುದೇ ಧಾರ್ಮಿಕ ಸಮುದಾ ಯದ ವಿರುದ್ಧವಾಗಲಿ, ಬಾಂಗ್ಲಾದೇಶದ ಸರ್ಕಾರದ ವಿರುದ್ಧವಾಗಲಿ ಅಲ್ಲ. ಇದು ಬಾಂಗ್ಲಾ ದೇಶದ ಎಲ್ಲ ಅಲ್ಪಸಂಖ್ಯಾತರ ಸುರಕ್ಷತೆಗಾಗಿ ನಡೆಯುತ್ತಿದೆ ಎಂದರು. ದೇವಸ್ಥಾನದ ಸ್ವಯಂ ಸೇವಕರು, ಭಕ್ತರು ಮತ್ತು ಸಾಮಾಜಿಕ ಕಾರ್ಯಕರ್ತರು ಕೀರ್ತನೆ ಮೆರವಣಿಗೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next