Advertisement

ಮಾರ್ಚ್ 13 ರಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ : ಧ್ರುವ ನಾರಾಯಣ್

02:20 PM Mar 10, 2021 | Team Udayavani |

ಶಿವಮೊಗ್ಗ : ಶಾಸಕ ಬಿ.ಕೆ.ಸಂಗಮೇಶ್ ಮತ್ತು ಕುಟುಂಬಸ್ಥರ ಮೇಲೆ ಕೇಸ್ ದಾಖಲು ವಿಚಾರವಾಗಿ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್, ಕ್ಷುಲ್ಲಕ ಕಾರಣಕ್ಕಾಗಿ ಸೆಕ್ಷನ್ 307 ಹಾಗೂ ಅಟ್ರಾಸಿಟಿ ಕೇಸ್ ದಾಖಲು ಮಾಡಿದ್ದಾರೆ. ಈಗಾಗಲೇ ಶಾಸಕರ ಪುತ್ರರನ್ನು ಬಂಧಿಸುವ ಕೆಲಸವನ್ನು ಸಹ ಮಾಡಿದ್ದಾರೆ. ಮಾರ್ಚ್ 13 ರಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ಸಭೆಯನ್ನು ನಡೆಸುತ್ತಿದ್ದೇವೆ ಎಂದರು.

Advertisement

ಶಿವಮೊಗ್ಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಸುದ್ದಿಗೋಷ್ಟಿಯಲ್ಲಿ ಹೇಳಿಕೆ ನೀಡಿದ್ದು, ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿಯಾಗ್ತಾರೆ. ಮಲ್ಲಿಕಾರ್ಜುನ್ ಖರ್ಗೆ, ಎಸ್.ಆರ್.‌ ಪಾಟೀಲ್, ಜಿ.ಪರಮೇಶ್ವರ್ ಸೇರಿದಂತೆ ಎಲ್ಲಾ ಶಾಸಕರು ಸಹ ಭಾಗಿಯಾಗಲಿದ್ದಾರೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಸೈನ್ಸ್ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ ಎಂದರು.

ಬಿಜೆಪಿ ಸರ್ಕಾರ ಅಧಿಕಾರವಧಿಯಲ್ಲಿ ಕೇಸ್ ಹಾಕುವ ಮೂಲಕ ವಿರೋಧ ಪಕ್ಷದವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ವಿರೋಧ ಪಕ್ಷದವರು, ಪತ್ರಕರ್ತರು ಹಾಗೂ ಬಿಜೆಪಿ ವಿರುದ್ಧ ಮಾತನಾಡಿದರೇ ದೇಶದ್ರೋಹದ ಪಟ್ಟಕಟ್ಟಿ, ಕೇಸ್ ಹಾಕಲಾಗುತ್ತೇ. ಸರ್ಕಾರ ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ. ಸಭಾಪತಿಗಳು ಸಹ ನೊಂದ ಶಾಸಕರ ಪರ ಇರಬೇಕು ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next