Advertisement
ಭಾನುವಾರ ಮತ್ತೆ ನಾಲ್ವರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 18ಕ್ಕೇರಿದೆ. ನೆರೆಯ ತೀವ್ರತೆ ಹೆಚ್ಚುತ್ತಿರುವಂತೆಯೇ ಕಾರ್ಯಾಚರಣೆಗಿಳಿದಿರುವ ಭಾರತೀಯ ವಾಯುಪಡೆಯು ಹಗಲುರಾತ್ರಿಯೆನ್ನದೇ ರಕ್ಷಣಾ ಕಾರ್ಯ ನಡೆಸುತ್ತಿದೆ.
ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕಾಗಿ ವಾಯುಪಡೆಯು ಎಎನ್-32 ಸಾರಿಗೆ ವಿಮಾನ, 2 ಎಂಐ-17 ಹೆಲಿಕಾಪ್ಟರ್ಗಳು, ಒಂದು ಚಿನೂಕ್ ಕಾಪ್ಟರ್, ಒಂದು ಎಎಲ್ಎಚ್ ಧ್ರುವ ಕಾಪ್ಟರ್ಗಳನ್ನು ನಿಯೋಜಿಸಿದೆ. ಶನಿವಾರ ಡಿಟೋಕೆcರಾ ರೈಲು ನಿಲ್ದಾಣದಲ್ಲಿ ಸಿಲುಕಿದ್ದ 119 ಮಂದಿಯನ್ನು ಎಂಐ-17 ಕಾಪ್ಟರ್ಗಳು ರಕ್ಷಣೆ ಮಾಡಿವೆ. ವಾಯುಪಡೆ ಮಾತ್ರವಲ್ಲದೇ ಎನ್ಡಿಆರ್ಎಫ್, ಎಸ್ಡಿಆರ್ಎಫ್, ತರಬೇತಿ ಪಡೆದ ಸ್ವಯಂಸೇವಕರು ಕೂಡ ರಕ್ಷಣಾ ಕಾರ್ಯದಲ್ಲಿ ನಿರತವಾಗಿದ್ದಾರೆ.
Related Articles
Advertisement
ಹಲವು ರಾಜ್ಯಗಳಲ್ಲಿ ಮಳೆಪೂರ್ವ ಹಾಗೂ ವಾಯವ್ಯ ಭಾರತದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ. ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲೂ ಮಧ್ಯಮ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಗುರುವಾರದವರೆಗೆ ಮಳೆಯಾಗಲಿದ್ದು, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ 2 ದಿನಗಳ ಕಾಲ ಗುಡುಗು ಸಹಿತ ವರ್ಷಧಾರೆ ಆಗಲಿದೆ ಎಂದೂ ಮುನ್ನೆಚ್ಚರಿಕೆ ನೀಡಿದೆ. ರಾಜಸ್ಥಾನದಲ್ಲಿ ಸೋಮವಾರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತಂಪಾಯ್ತು ದೆಹಲಿ; ತಾಪಮಾನ 23.1 ಡಿ.ಸೆ.
ಕಳೆದ 2 ತಿಂಗಳಿಂದ ಅತಿಯಾದ ಬಿಸಿಲಿನಿಂದ ಬೆಂದಿದ್ದ ದೆಹಲಿ ಭಾನುವಾರ ತಂಪಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕನಿಷ್ಠ ತಾಪಮಾನ 23.1 ಡಿ.ಸೆ. ದಾಖಲಾಗಿದೆ. ಭಾನುವಾರ ಅಲ್ಪ ಪ್ರಮಾಣದಲ್ಲಿ ಮಳೆಯೂ ಆಗಿದೆ. ಹೀಗಾಗಿ, ವಾತಾವರಣ ತಂಪಾಗಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ. ಸಿಡಿಲು ಬಡಿದು 3 ಸಾವು
ಉತ್ತರಪ್ರದೇಶದ ಕನೇಟಾ ಗ್ರಾಮದಲ್ಲಿ ಶನಿವಾರ ರಾತ್ರಿ ಸಿಡಿಲು ಬಡಿದ ಪರಿಣಾಮ ಮೂವರು ಸಾವಿಗೀಡಾಗಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಕಾರ್ಮಿಕರು ಮರ ಕಡಿಯುತ್ತಿದ್ದ ಸಮಯದಲ್ಲೇ ಮರಕ್ಕೆ ಸಿಡಿಲು ಬಡಿದು ಈ ದುರ್ಘಟನೆ ಸಂಭವಿಸಿದೆ. ಅಸ್ಸಾಂ ಅತಂತ್ರ
ಸಂಕಷ್ಟದಲ್ಲಿ ಸಿಲುಕಿರುವವರು- 8 ಲಕ್ಷ
ಮೃತರ ಸಂಖ್ಯೆ – 18
ಜಲಾವೃತಗೊಂಡ ಗ್ರಾಮಗಳು- 3,246
ಪರಿಹಾರ ಶಿಬಿರಗಳಲ್ಲಿ ಇರುವವರು- 74,907