Advertisement

Maharashtra: ಕಾರ್ಖಾನೆಯಲ್ಲಿ ಅಗ್ನಿ ಅಗಘಡ; ಆರು ಕಾರ್ಮಿಕರು ಸಾವು, ಹಲವರಿಗೆ ಗಾಯ

08:05 AM Dec 31, 2023 | Team Udayavani |

ಮುಂಬೈ: ಕಾರ್ಖಾನೆಯೊಂದರಲ್ಲಿ ಅಗ್ನಿ ಆಕಸ್ಮಿಕ ನಡೆದು ಕನಿಷ್ಠ ಆರು ಮಂದಿ ಮೃತಪಟ್ಟ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದಲ್ಲಿ ನಡೆದಿದೆ. ಮಧ್ಯರಾತ್ರಿಯ ವೇಳೆ ಈ ಘಟನೆ ಜರಗಿದೆ ಎಂದು ವರದಿ ತಿಳಿಸಿದೆ.

Advertisement

ಕೈಗವಸು ಉತ್ಪಾದನಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಧಿಕಾರಿಗಳ ಪ್ರಕಾರ, ಅಗ್ನಿಶಾಮಕ ವಾಹನಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಕಟ್ಟಡದೊಳಗೆ ಸಿಲುಕಿರುವ ವ್ಯಕ್ತಿಗಳನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಬೆಳಗಿನ ವೇಳೆಗೆ ಬೆಂಕಿ ಹತೋಟಿಗೆ ಬಂದಿದೆ.

ರಾತ್ರಿ ವೇಳೆ ಕಾರ್ಖಾನೆ ಮುಚ್ಚಿದ್ದು, ಬೆಂಕಿ ಹೊತ್ತಿಕೊಂಡಾಗ ಅವರು ಮಲಗಿದ್ದರು ಎಂದು ಕಾರ್ಮಿಕರು ತಿಳಿಸಿದ್ದಾರೆ. ಈ ವೇಳೆ ಸುಮಾರು 10-15 ಮಂದಿ ಕಟ್ಟಡದೊಳಗೆ ಸಿಲುಕಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next