Advertisement

BJP ಕಾರ್ಯಕರ್ತೆಯ ಬಂಧನ ಖಂಡಿಸಿ ಬೃಹತ್‌ ಪ್ರತಿಭಟನೆ

11:04 PM Jul 29, 2023 | Team Udayavani |

ತುಮಕೂರು: ಉಡುಪಿ ಘಟನೆಯಲ್ಲಿ ನೊಂದ ಯುವತಿ ಪರವಾಗಿ ನ್ಯಾಯ ಕೇಳಿ ರಾಜ್ಯ ಕಾಂಗ್ರೆಸ್‌ ಸರಕಾರಕ್ಕೆ ಟ್ವೀಟ್‌ ಮಾಡಿದ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಶನಿವಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು.

Advertisement

ನಗರದ ಟೌನ್‌ಹಾಲ್‌ ಬಿಜಿಎಸ್‌ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಬಿಜೆಪಿ ಕಾರ್ಯಕರ್ತರು, ರಾಜ್ಯ ಸರಕಾರದ ಧೋರಣೆ ವಿರುದ್ಧ ಧಿಕ್ಕಾರ ಕೂಗುತ್ತಾ ಪ್ರಮುಖ ರಸ್ತೆಯಲ್ಲಿ ಪ್ರತಿಭಟನ ಮೆರವಣಿಗೆ ನಡೆಸಿದರು. ಬಳಿಕ ಕೋಡಿ ಸರ್ಕಲ್‌ನಲ್ಲಿ ರಾಜ್ಯ ಸರಕಾರದ ಧೋರಣೆ ಖಂಡಿಸಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಮಾತನಾಡಿ, ರಾಜ್ಯ ಸರಕಾರದಿಂದ ನ್ಯಾಯ ಕೇಳಿ ಟ್ವೀಟ್‌ ಮಾಡಿದ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸುವ ಮೂಲಕ ಕಾಂಗ್ರೆಸ್‌ ಸರಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next