Advertisement

ನೆರೆ ಪರಿಹಾರ ತಾರತಮ್ಯ ಖಂಡಿಸಿ ಜೆಡಿಎಸ್ ನಿಂದ ಇಂದು ಬೃಹತ್ ಪ್ರತಿಭಟನಾ ರ್ಯಾಲಿ

10:13 AM Oct 11, 2019 | Team Udayavani |

ಬೆಂಗಳೂರು: ಮೂರು ದಿನಗಳ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗುವ ಹಿನ್ನಲೆ  ನೆರೆ ಪರಿಹಾರ ತಾರತಮ್ಯ ಖಂಡಿಸಿ ಇಂದು ಜೆಡಿಎಸ್ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಿದೆ.

Advertisement

ಪಕ್ಷದ  ವರಿಷ್ಠ ಹೆಚ್ ಡಿ ದೇವೆಗೌಡ ನೇತೃತ್ವದಲ್ಲಿ ಜೆಡಿಎಸ್ ಕಚೇರಿಯಿಂದ ನಗರದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದ್ದು 5 ಸಾವಿರಕ್ಕಿಂತಲೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಕಲಾಪ ಆರಂಭವಾಗುತ್ತಿದ್ದಂತೆ , ಪ್ರವಾಹ ಪರಿಹಾರ ಹಾಗೂ ಆಡಳಿತ ವೈಫ‌ಲ್ಯವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳು ಸನ್ನದ್ಧಗೊಂಡಿವೆ.

Advertisement

Udayavani is now on Telegram. Click here to join our channel and stay updated with the latest news.

Next