Advertisement

ವಾಲ್ಮೀಕಿ ಸಮುದಾಯದ ಬೃಹತ್ ಪ್ರತಿಭಟನೆ, ಕಾರು ಬಿಟ್ಟು ಮೆಟ್ರೋದಲ್ಲಿ ತೆರಳಿದ ಡಿಕೆಶಿ!

09:42 AM Jun 26, 2019 | Nagendra Trasi |

ಬೆಂಗಳೂರು: ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಸೋಮವಾರ ವಾಲ್ಮೀಕಿ ಸಮುದಾಯ ಸಹಸ್ರಾರು ಸಂಖ್ಯೆಯಲ್ಲಿ ಪಾದಯಾತ್ರೆ ಮೂಲಕ ಬೆಂಗಳೂರಿಗೆ ಆಗಮಿಸಿ ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದ್ದು, ಬೃಹತ್ ಪ್ರತಿಭಟನೆಯಿಂದಾಗಿ ವಿಧಾನಸೌಧ ಸುತ್ತಮುತ್ತ ಟ್ರಾಫಿಕ್ ಜಾಮ್ ಸಂಭವಿಸಿದೆ.

Advertisement

ಅಲ್ಲದೇ ಪ್ರತಿಭಟನೆಯ ಬಿಸಿ ಸಚಿವ ಡಿಕೆ ಶಿವಕುಮಾರ್ ಅವರಿಗೂ ತಟ್ಟಿದ್ದು, ಕಾರನ್ನು ಬಿಟ್ಟು ವಿಧಾನಸೌಧದಿಂದ ಸೆಂಟ್ರಲ್ ಕಾಲೇಜ್ ವರೆಗೆ ಡಿಕೆಶಿ ಮೆಟ್ರೋದಲ್ಲಿ ಪ್ರಯಾಣಿಸುವ ಮೂಲಕ ಕೋರ್ಟ್ ಗೆ ಹಾಜರಾಗಿದ್ದಾರೆ. ಡಿಕೆಶಿ ಮನೆ ಮೇಲೆ ಐಟಿ ದಾಳಿ ಪ್ರಕರಣದ ಸಂಬಂಧ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರಾಗಬೇಕಾಗಿತ್ತು.

ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಪಾದಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಸಂಭವಿಸಿದೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಪ್ರತಿಭಟನಾಕಾರರು ವಿಧಾನಸೌಧದ ಎದುರು ಧರಣಿ ನಡೆಸುತ್ತಿದ್ದಾರೆ.

Advertisement

ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಜೂನ್ 9ರಿಂದ ದಾವಣಗೆರೆಯಿಂದ ಆರಂಭಗೊಂಡಿದ್ದ ಪಾದಯಾತ್ರೆ ಇಂದು ಬೆಂಗಳೂರು ತಲುಪಿತ್ತು.

ಫೋಟೋ: ಫಕ್ರುದ್ದೀನ್

Advertisement

Udayavani is now on Telegram. Click here to join our channel and stay updated with the latest news.

Next