Advertisement

ಮಾತೃಭೂಮಿ ಕ್ರೆಡಿಟ್‌ ಸೊಸೈಟಿ ವಾರ್ಷಿಕ ಮಹಾ ಸಭೆ

02:29 PM Aug 09, 2017 | |

ಮುಂಬಯಿ: ಬಂಟರ ಸಂಘ ಮುಂಬಯಿ ಸಂಚಾಲಕತ್ವದ  ಮಾತೃಭೂಮಿ ಕೋ ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ಲಿಮಿಟೆಡ್‌ ಇದರ 20ನೇ ವಾರ್ಷಿಕ ಮಹಾಸಭೆಯು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಜರಗಿತು.

Advertisement

ಇದೇ ಸಂದರ್ಭದಲ್ಲಿ ಮಾತೃ ಭೂಮಿ ಸೊಸೈಟಿಯ ರತ್ನಗಿರಿ ಬ್ಯಾಂಕ್‌ ಜೊತೆ ವಿಲೀನಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸಿದ ಬಂಟ್ಸ್‌ ಸಂಘ ಮುಂಬಯಿ ಇದರ ಜತೆ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಶೆಟ್ಟಿ ಕುತ್ಯಾರ್‌, ಉದ್ಯಮಿ ಜಗದೀಶ್‌ ಶೆಟ್ಟಿ ಮುಲುಂಡ್‌ ಇವರಿಗೆ ಹಾಗೂ ಹಿರಿಯ ಧುರೀಣರು, ವಿವಿಧ ಬಂಟರ ಸಂಸ್ಥೆಗಳ ಮುಖ್ಯಸ್ಥರನ್ನು ಕಾರ್ಯಾಧ್ಯಕ್ಷ ಸಿಎ ಶಂಕರ ಬಿ. ಶೆಟ್ಟಿ ಪುಷ್ಪಗುತ್ಛವನ್ನಿತ್ತು  ಗೌರವಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ರತ್ನಗಿರಿ ಬ್ಯಾಂಕ್‌ ಕಾರ್ಯಾಧ್ಯಕ್ಷ ಸುಜೀತ್‌ ಝಿಮನ್‌, ಮಾತೃಭೂಮಿ ಕ್ರೆಡಿಟ್‌ ಸೊಸೈಟಿ ಉಪ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಗೌರವ ಕಾರ್ಯದರ್ಶಿ ಸಿಎ ರಮೇಶ್‌ ಎ. ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ನಿರ್ದೇಶಕರಾದ ಶಿವರಾಮ ಜಿ. ಶೆಟ್ಟಿ, ಉಮಾ ಕೆ. ಶೆಟ್ಟಿ, ಕರ್ನಿರೆ ವಿಶ್ವನಾಥ ಶೆಟ್ಟಿ, ರತ್ನಾಕರ ಶೆಟ್ಟಿ ಮುಂಡ್ಕೂರು, ಸುಜಾತಾ ಜಿ. ಶೆಟ್ಟಿ, ಸಂತೋಷ ಎಂ. ಜಾವಂದಲೆ, ಬಾಂಬೇ ಬಂಟ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷ ಉಪ್ಪೂರು ಶೇಖರ್‌ ಶೆಟ್ಟಿ, ಸೊಸೈಟಿಯ ಹಿರಿಯ ವ್ಯವಸ್ಥಾಪಕಿ ಮಲ್ಲಿಕಾ ಪಿ. ಶೆಟ್ಟಿ, ಹಣಕಾಸು ಪ್ರಬಂಧಕಿ ಶಶಿಕಲಾ ಎಸ್‌. ಶೆಟ್ಟಿ, ಪ್ರಬಂಧಕರಾದ‌ ಕಿಶೋರ್‌ ಎಂ. ಪಾಟೀಲ್‌, ಶಂಕರ್‌ ಬಿ. ಶೆಟ್ಟಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

 ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

Advertisement

Udayavani is now on Telegram. Click here to join our channel and stay updated with the latest news.

Next