Advertisement

ಮಠಗಳು ಸಮಾಜದ ಅಭಿವೃದ್ಧಿಯ ದಿಕ್ಸೂಚಿಯಾಗಬೇಕು: ಯಡಿಯೂರಪ್ಪ

08:43 PM Apr 03, 2022 | Team Udayavani |

ಬೆಂಗಳೂರು: ಸಮಾಜದ ಅಭಿವೃದ್ಧಿಯಲ್ಲಿ ದಿಕ್ಸೂಚಿಯಂತೆ ಮಠಗಳು ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೇಳಿದ್ದಾರೆ. ಅಕ್ಕಿಪೇಟೆಯ ಶ್ರೀದೊಡ್ಡ ಮಠ ರವಿವಾರ ಹಮ್ಮಿಕೊಂಡಿದ್ದ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ನೂತನ ದೇವಾಲಯವನ್ನು ಉದ್ಘಾಟಿಸಿ  ಅವರು ಮಾತನಾಡಿದರು.

Advertisement

ನಾಡುಗಳ ಅಭಿವೃದಿಯಲ್ಲಿ ಮಠ ಮಾನ್ಯಗಳು ಪ್ರಮುಖವಾದ ಪಾತ್ರವನ್ನು ನಿರ್ವಹಿಸಲಿವೆ. ತುಮಕೂರಿನ ಸಿದ್ದಗಂಗಾ ಶ್ರೀಗಳ ಬದುಕು ನಮ್ಮೆಲ್ಲರ ಜೀವನಕ್ಕೆ ದಾರಿ ದೀಪ ಎಂಬುದನ್ನು ಮರೆಯುವಂತಿಲ್ಲ. ಎಲ್ಲರೂ ಧರ್ಮದ ಹಾದಿಯಲ್ಲಿ ನಡೆದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಜತೆಗೆ ಆಡಳಿತ ವ್ಯವಸ್ಥೆ ಕೂಡ ಸುಲಲಿತವಾಗುತ್ತದೆ. ಮಠಾಧೀಶರು ಸರ್ವರ ಸುಖಕ್ಕಾಗಿ ಜಗತ್ತಿನ ಕಲ್ಯಾಣಕ್ಕಾಗಿ ಹಾಗೂ ಶಾಂತಿ ಸಾಮರಸ್ಯದ ನಿರ್ಮಾಣಕ್ಕಾಗಿ ಶ್ರಮಿಸುತ್ತಾ ಇದ್ದಾರೆ ಎಂದರು.

ಸುತ್ತೂರಿನ ಶ್ರೀ ಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಂಸದ ಪಿ.ಸಿ.ಮೋಹನ್‌, ಶಾಸಕ ದಿನೇಶ ಗುಂಡೂರಾವ್‌, ಶ್ರೀದೊಡ್ಡಮಠದ ಶ್ರೀ ಶಿವಬಸವ ಸ್ವಾಮೀಜಿ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next