Advertisement

ಮಠ- ಮಂದಿರಗಳಿಗೆ ಕೆ.ಎಸ್‌. ಈಶ್ವರಪ್ಪ ಭೇಟಿ

06:40 AM Apr 15, 2018 | Team Udayavani |

ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಶನಿವಾರ ನಗರದ ವಿವಿಧ ಮಠಗಳಿಗೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು. 

Advertisement

ಮೊದಲಿಗೆ ವೆಂಕಟೇಶ ನಗರದ ಬಸವಕೇಂದ್ರಕ್ಕೆ ಭೇಟಿ ನೀಡಿ, ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಬಳಿಕ, ಕಲ್ಲುಗಂಗೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ಸ್ವಾಮಿ ವಿನಯಾನಂದ ಸರಸ್ವತಿಯವರ ಆಶೀರ್ವಾದ  ಪಡೆದರು. ಅಲ್ಲಿಂದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಶ್ರೀ ಪ್ರಸನ್ನನಾಥ ಸ್ವಾಮೀಜಿ ಆಶೀರ್ವಾದ ಪಡೆದರು. ನಂತರ, ಬೆಕ್ಕಿನಕಲ್ಮಠಕ್ಕೆ ಭೇಟಿ ನೀಡಿ, ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎಸ್‌.ರುದ್ರೇಗೌಡ ಮತ್ತಿತರರು ಜತೆಗಿದ್ದರು.

ಟಿಕೆಟ್‌ ಹಂಚಿಕೆ ವಿಚಾರವಾಗಿ ಬಿಜೆಪಿಯಲ್ಲಿನ ಸಣ್ಣಪುಟ್ಟ ಗೊಂದಲವನ್ನು ಪಕ್ಷದ ಚೌಕಟ್ಟಿನಲ್ಲಿ ಸರಿಪಡಿಸಿಕೊಳ್ಳಲಾಗುವುದು. ಆದರೆ, ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದರೆ ಬಾಂಬ್‌ ಸ್ಫೋಟಗೊಳ್ಳಲಿದೆ.
– ಕೆ.ಎಸ್‌.ಈಶ್ವರಪ್ಪ, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ.

Advertisement

Udayavani is now on Telegram. Click here to join our channel and stay updated with the latest news.

Next