Advertisement

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಅಧ್ಯಕ್ಷರಾಗಿ ಮಟ್ಟಾರು ರತ್ನಾಕರ ಹೆಗ್ಡೆ

11:15 PM Feb 07, 2020 | Sriram |

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡು 2008ರಲ್ಲಿ ರಚಿಸಲಾಗಿರುವ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಅಧ್ಯಕ್ಷರಾಗಿ ಬಿಜೆಪಿ ಉಡುಪಿ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ, ಹಿರಿಯ ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ ಅವರನ್ನು ರಾಜ್ಯ ಸರಕಾರ ಆದೇಶಿಸಿ ನೇಮಕಗೊಳಿಸಿದೆ.

Advertisement

ಹೆಗ್ಡೆ ಅವರು ಕಳೆದ ಅವಧಿಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಎಲ್ಲ ಚುನಾವಣೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಎರಡು ಬಾರಿ ಕಾರ್ಯನಿರ್ವಹಿಸಿದ್ದಲ್ಲದೆ, ಕಾನೂನು ವಿ.ವಿ. ಸಿಂಡಿಕೇಟ್‌ ಸದಸ್ಯರಾಗಿ, ಉಡುಪಿ ಎಪಿಎಂಸಿ ಅಧ್ಯಕ್ಷರಾಗಿ, ರಾಜ್ಯ ಮಾರ್ಕೆಟಿಂಗ್‌ ಬೋರ್ಡ್‌ ನಿರ್ದೇಶಕರಾಗಿ, ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯರಾಗಿ, ವಿದ್ಯಾವರ್ಧಕ ಸೆಂಟ್ರಲ್‌ ಸ್ಕೂಲ್‌ನ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು.

ಶಿರ್ವ ಗ್ರಾಮದ ಪ್ರತಿಷ್ಠಿತ ಮಟ್ಟಾರು ಪರಾಡಿ ಮನೆತನದವರಾದ ಅವರು ಸಾಮಾಜಿಕ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next