Advertisement

ಬಿಡುವು ನೀಡಿದ ಮಳೆ; ಮೇ 22ರಂದು ಎಲ್ಲೋ ಅಲರ್ಟ್‌

11:36 PM May 21, 2022 | Team Udayavani |

ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಬಿರುಸು ಪಡೆದ ಶನಿವಾರ ತುಸು ಬಿಡುವು ನೀಡಿತ್ತು. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಬಿಸಿಲು ಮತ್ತು ಮಳೆಯಿಂದ ಕೂಡಿದ ವಾತಾವರಣ ಇತ್ತು.

Advertisement

ಉಡುಪಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಶನಿವಾರ ಹಲವೆಡೆ ತುಂತುರು ಮಳೆಯಾಗಿದೆ. ಮೋಡ ಕವಿದ ವಾತಾವರಣದೊಂದಿಗೆ ಕುಂದಾಪುರ, ಕಾರ್ಕಳ, ಉಡುಪಿ, ಕಾಪು, ಪಡುಬಿದ್ರಿ, ಬ್ರಹ್ಮಾವರ ಭಾಗದಲ್ಲಿ ಕೆಲವೆಡೆ ಸಣ್ಣದಾಗಿ ಮಳೆ ಸುರಿದಿದೆ.

ಎಲ್ಲೋ ಅಲರ್ಟ್‌
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 21 ಮತ್ತು 22ರಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಉತ್ತಮ ಗಾಳಿ ಮಳೆಯಾಗುವ ನಿರೀಕ್ಷೆ ಇದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮಾಹಿತಿಯಂತೆ ಶನಿವಾರದಂದು 30.8 ಡಿ.ಸೆ. ಗರಿಷ್ಠ ಮತ್ತು 22 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next