Advertisement

“ಪೇಜಾವರ ಶ್ರೀ ಆತ್ಮಕ್ಕೆ ಸದ್ಗತಿ ಸಿಗಲಿ’

10:44 PM Dec 30, 2019 | Lakshmi GovindaRaj |

ಬೆಂಗಳೂರು: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯರವ ನಿಧನ ಅತೀವ ಬೇಸರ ತಂದಿದೆ. ಶ್ರೀಗಳು ಆರೋಗ್ಯವಂತರಾಗಿ ಆಸ್ಪತ್ರೆಯಿಂದ ಹೊರಬರಲಿ ಎಂದು ಅವರ ಅಭಿಮಾನಿಗಳು, ಉಡುಪಿ ಮಠದ ಭಕ್ತರು ಪೂಜೆ, ಪ್ರಾರ್ಥನೆಗಳು ಸಲ್ಲಿಸಿದ್ದರು. ಆದರೆ, ಅವರ ಪ್ರಾರ್ಥನೆ ಫ‌ಲಿಸಲಿಲ್ಲ ಎಂಬುದು ನಿರಾಶ ದಾಯಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

Advertisement

ಉಡುಪಿಯ ಎಂಟು ಮಠಗಳ ಮಠಾಧೀಶರಲ್ಲಿಯೇ ಅತ್ಯಂತ ಪ್ರಭಾವಶಾಲಿ ಯಾಗಿದ್ದ ವಿಶ್ವೇಶತೀರ್ಥರು, ಜಾಗತಿಕ ಮನ್ನಣೆ ಗಳಿಸಿದ್ದರು. ರಾಜಕೀಯ ಸಾಮಾಜಿಕ ವಿಚಾರ ಗಳಲ್ಲಿಯೂ ಅವರು ತೊಡಗಿಕೊಂಡಿದ್ದರು.

ಶ್ರೀಗಳ ಆತ್ಮಕ್ಕೆ ಸದ್ಗತಿ ಸಿಗಲಿ ಹಾಗೂ ಭಕ್ತರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ. ಶ್ರೀಗಳ ನಿಧನವು ನಾಡಿಗೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಶ್ರೀಗಳ ಆತ್ಮಕ್ಕೆ ಭಗವಂತನು ಶಾಂತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next