Advertisement

ಕೈ ವಿರುದ್ಧ ಮಾಯಾ ವಾಗ್ಧಾಳಿ

12:30 AM Feb 04, 2019 | Team Udayavani |

ಹೊಸದಿಲ್ಲಿ: ಮಧ್ಯಪ್ರದೇಶ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಎಸ್‌ಪಿ ನಾಯಕಿ ಮಾಯಾವತಿ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ತುಳಿಯುವಂಥ ಸಂಪ್ರದಾಯ ಮುಂದುವರಿದಿದೆ ಎನ್ನುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. 

Advertisement

ರಾಜ್ಯದಲ್ಲಿ ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೆ ಬರಲಿಲ್ಲ ಎಂದಾಗ ಜನರಲ್ಲಿ ನೆಮ್ಮದಿ ಮೂಡಿತು. ಆದರೆ, ಹೊಸ ಸರ್ಕಾರವು ಮಾಡುತ್ತಿರುವ ಕೆಲಸದ ಬಗ್ಗೆ ಜನರಿಗೆ ತೃಪ್ತಿಯಾಗುತ್ತಿಲ್ಲ.ಚುನಾವಣಾ ಫ‌ಲಿತಾಂಶಕ್ಕೂ ಮುನ್ನ ಕಾಂಗ್ರೆಸ್‌ಗೆ ಬೆಂಬಲ ಕೊಡಲು ನಿರಾಕರಿಸಿದ್ದ ಬಿಎಸ್‌ಪಿ, ನಂತರ ಬಾಹ್ಯ ಬೆಂಬಲ ಘೋಷಿಸಿತ್ತು. ನನ್ನ ಸಿದ್ಧಾಂತಕ್ಕೂ ಕಾಂಗ್ರೆಸ್‌ ಸಿದ್ಧಾಂತಕ್ಕೂ ಆಗಿ ಬರುವುದಿಲ್ಲ. ಆದರೂ, ಬಿಜೆಪಿಯನ್ನು ಹೊರಗಿಡಬೇಕು ಎಂಬ ಏಕೈಕ ಉದ್ದೇಶದಿಂದ ಕಾಂಗ್ರೆಸ್‌ಗೆ ಬೆಂಬಲ ನೀಡಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next