Advertisement

ನರೇಗಾದಡಿ ಕೆಲಸ ನೀಡಲು ಆಗ್ರಹ

04:06 PM May 10, 2020 | Team Udayavani |

ಮಾಯಕೊಂಡ: ನರೇಗಾ ಯೋಜನೆಯಡಿ ಕೆಲಸ ನೀಡುತ್ತಿಲ್ಲ ಎಂದು ಆನಗೋಡು ಹೋಬಳಿಯ ಕಂದನಕೋವಿ ಗ್ರಾಮ ಪಂಚಾಯತ್
ವ್ಯಾಪ್ತಿಯ ಶಾಸ್ತ್ರಿಹಳ್ಳಿ ಗ್ರಾಮದ ಗ್ರಾಮಸ್ಥರು ಆರೋಪಿಸಿದ್ದಾರೆ. ಕಂದನಕೋವಿ ಗ್ರಾಪಂ ಕಚೇರಿಗೆ ಆಗಮಿಸಿದ ಗ್ರಾಮಸ್ಥರು ಹಾಗೂ ಮಹಿಳೆಯರು, ಜಿಪಂ ಸದಸ್ಯ ಬಸವಂತಪ್ಪ ಅವರಲ್ಲಿ ತಮಗೆ ಕೆಲಸ ನೀಡುತ್ತಿಲ್ಲ ಎಂದು ಅಹವಾಲು ಹೇಳಿಕೊಂಡರು.

Advertisement

ಕೋವಿಡ್ ಲಾಕ್‌ಡೌನ್‌ ಇರುವುದರಿಂದ ನಮಗೆ ಕೂಲಿ ಕೆಲಸ ಇಲ್ಲದೆ ಒಂದು ಹೊತ್ತಿನ ಊಟಕ್ಕೂ ತೊಂದರೆಯಾಗಿದೆ. ಗ್ರಾಪಂನವರು ಕೆಲಸ ನೀಡುತ್ತಿಲ್ಲ ಎಂದು ದೂರಿದರು. ಇದಕ್ಕೆ ಸ್ಪಂದಿಸಿದ ಜಿಪಂ ಸದಸ್ಯ ಬಸವಂತಪ್ಪ, ದೂರವಾಣಿಯಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಿ ಕೆಲಸ ನೀಡುವಂತೆ ಸೂಚಿಸಿದರು. ನರೇಗಾ ಅಡಿ ಕೆಲಸ ನೀಡುವುದಾಗಿ ಅಧಿಕಾರಿಗಳು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next